<p class="title"><strong>ನವದೆಹಲಿ :</strong> ಭಾರತೀಯ ವಾಯುಪಡೆಗೆ (ಐಎಎಫ್) 2009ರಲ್ಲಿ 75 ಪೈಲಟ್ಗಳ ತರಬೇತಿ ವಿಮಾನ ಖರೀದಿ ವೇಳೆ ಭ್ರಷ್ಟಾಚಾರ ಆರೋಪ ಹಾಗೂ ಹಣ ಅಕ್ರಮ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಶುಕ್ರವಾರ ವಿವಿಧ ನಗರಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.</p>.<p class="title">ದೆಹಲಿಯಲ್ಲಿಯೇ ವಿವಿಧ 12 ಸ್ಥಳಗಳು, ಸೂರತ್ ಮತ್ತು ಗುರುಗ್ರಾಮದ ತಲಾ ಒಂದು ಕಡೆ ದಾಳಿ ನಡೆದಿದೆ. ಹಣ ಅಕ್ರಮ ವರ್ಗಾವಣೆ ನಿಯಂತ್ರಣ ಕಾಯ್ದೆ (ಪಿಎಂಎಲ್ಎ) ಅನ್ವಯ ಪ್ರಕರಣ ದಾಖಲಿಸಿರುವ ಕೇಂದ್ರ ತನಿಖಾ ಸಂಸ್ಥೆಯು, ಪೂರಕ ದಾಖಲೆಗಳನ್ನು, ಸಾಕ್ಷ್ಯವನ್ನು ಸಂಗ್ರಹಿಸುವ ಕ್ರಮವಾಗಿ ಈ ದಾಳಿ ನಡೆಯಿತು ಎಂದು ಮೂಲಗಳು ತಿಳಿಸಿವೆ.</p>.<p class="title">ಮಧ್ಯವರ್ತಿಯಾಗಿದ್ದ ಶಸ್ತ್ರಾಸ್ತ್ರ ಸಲಹೆಗಾರ ಸಂಜಯ್ ಭಂಡಾರಿ ಅವರು ತಲೆಮರೆಸಿಕೊಂಡಿರುವ ಬಗ್ಗೆಯೂ ತನಿಖೆ ನಡೆಯುತ್ತಿದೆ. ಭಂಡಾರಿ ಅವರು ಈಗಾಗಲೇ ನಿಗದಿತ ಆದಾಯ ಮೀರಿದ ಆಸ್ತಿ ಹೊಂದಿರುವ ಪ್ರಕರಣಗಳಿಗೆ ಸಂಬಂಧಿಸಿ ಇ.ಡಿ ಮತ್ತು ಸಿಬಿಐ ತನಿಖೆಯನ್ನು ಎದುರಿಸುತ್ತಿದ್ದಾರೆ. ಭಂಡಾರಿ ಸದ್ಯ ಯು.ಕೆಯಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ :</strong> ಭಾರತೀಯ ವಾಯುಪಡೆಗೆ (ಐಎಎಫ್) 2009ರಲ್ಲಿ 75 ಪೈಲಟ್ಗಳ ತರಬೇತಿ ವಿಮಾನ ಖರೀದಿ ವೇಳೆ ಭ್ರಷ್ಟಾಚಾರ ಆರೋಪ ಹಾಗೂ ಹಣ ಅಕ್ರಮ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಶುಕ್ರವಾರ ವಿವಿಧ ನಗರಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.</p>.<p class="title">ದೆಹಲಿಯಲ್ಲಿಯೇ ವಿವಿಧ 12 ಸ್ಥಳಗಳು, ಸೂರತ್ ಮತ್ತು ಗುರುಗ್ರಾಮದ ತಲಾ ಒಂದು ಕಡೆ ದಾಳಿ ನಡೆದಿದೆ. ಹಣ ಅಕ್ರಮ ವರ್ಗಾವಣೆ ನಿಯಂತ್ರಣ ಕಾಯ್ದೆ (ಪಿಎಂಎಲ್ಎ) ಅನ್ವಯ ಪ್ರಕರಣ ದಾಖಲಿಸಿರುವ ಕೇಂದ್ರ ತನಿಖಾ ಸಂಸ್ಥೆಯು, ಪೂರಕ ದಾಖಲೆಗಳನ್ನು, ಸಾಕ್ಷ್ಯವನ್ನು ಸಂಗ್ರಹಿಸುವ ಕ್ರಮವಾಗಿ ಈ ದಾಳಿ ನಡೆಯಿತು ಎಂದು ಮೂಲಗಳು ತಿಳಿಸಿವೆ.</p>.<p class="title">ಮಧ್ಯವರ್ತಿಯಾಗಿದ್ದ ಶಸ್ತ್ರಾಸ್ತ್ರ ಸಲಹೆಗಾರ ಸಂಜಯ್ ಭಂಡಾರಿ ಅವರು ತಲೆಮರೆಸಿಕೊಂಡಿರುವ ಬಗ್ಗೆಯೂ ತನಿಖೆ ನಡೆಯುತ್ತಿದೆ. ಭಂಡಾರಿ ಅವರು ಈಗಾಗಲೇ ನಿಗದಿತ ಆದಾಯ ಮೀರಿದ ಆಸ್ತಿ ಹೊಂದಿರುವ ಪ್ರಕರಣಗಳಿಗೆ ಸಂಬಂಧಿಸಿ ಇ.ಡಿ ಮತ್ತು ಸಿಬಿಐ ತನಿಖೆಯನ್ನು ಎದುರಿಸುತ್ತಿದ್ದಾರೆ. ಭಂಡಾರಿ ಸದ್ಯ ಯು.ಕೆಯಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>