ರಾಂಚಿ: ಜಾರ್ಖಂಡ್ನ ಹಲವು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.
ಜಾರ್ಖಂಡ್ ರಾಜ್ಯ ಖನಿಜ ಅಭಿವೃದ್ಧಿ ನಿಗಮದ (ಜೆಎಸ್ಎಂಡಿಸಿ) ಮಾಜಿ ಉದ್ಯೋಗಿ ಅಶೋಕ್ ಕುಮಾರ್ ಮತ್ತು ಎಹ್ಸಾನ್ ಅನ್ಸಾರಿ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಅಶೋಕ್ ಕುಮಾರ್ ಮತ್ತು ಎಹ್ಸಾನ್ ಅನ್ಸಾರಿಗೆ ಸೇರಿದ ರಾಂಚಿ ಮತ್ತು ಹಜಾರಿಬಾಗ್ನಲ್ಲಿರುವ 14 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ.
ಅನ್ಸಾರಿ ಬಳಿ ₹3 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ.ಈ ಹಣ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ಗೆ ಸಂಬಂಧಿಸಿದ್ದಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ.
Enforcement Directorate (ED) today seized cash amount of Rs 3 crores allegedly linked to the IAS Pooja Singhal during a raid at the premises one Md. Ezhar Ansari at Hazaribagh. Ezhar Ansari controls a group of private companies: ED https://t.co/5qoccAZl3vpic.twitter.com/EBLtDylYx9