ನವದೆಹಲಿ/ಹೈದರಾಬಾದ್: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಬಿಆರ್ಎಸ್ ಮುಖಂಡ ಹಾಗೂ ತೆಲಂಗಾಣ ಸಚಿವ ಗಂಗೂಲ ಕಮಲಾಕರ್ ಅವರಿಗೆ ಸೇರಿದ ಕಚೇರಿಗಳಲ್ಲಿ ಬುಧವಾರ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.
ಹೈದರಾಬಾದ್ ಮತ್ತು ಕರೀಂನಗರ ಜಿಲ್ಲೆಗಳ ವಿವಿಧೆಡೆ ಶೋಧ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗ್ರಾನೈಟ್ ವ್ಯವಹಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಿಬಿಐ ಎಫ್ಐಆರ್ ದಾಖಲಿಸಿಕೊಂಡ ಬಳಿಕ ಇ.ಡಿ ಕೂಡ ಇದೇ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದೆ.