ಮುಂಬೈ/ನವದೆಹಲಿ (ಪಿಟಿಐ): ಮಹಾರಾಷ್ಟ್ರ ಪೊಲೀಸ್ ಇಲಾಖೆಯಲ್ಲಿನ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಮುಂಬೈ ಪೊಲೀಸ್ ಕಮಿಷನರ್ ಪರಮ್ಬೀರ್ ಸಿಂಗ್ ಅವರ ಹೇಳಿಕೆಯನ್ನು ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡಿದೆ.
ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ನಿಬಂಧನೆಗಳ ಅಡಿಯಲ್ಲಿ ದಕ್ಷಿಣ ಮುಂಬೈನಲ್ಲಿರುವ ಏಜೆನ್ಸಿಯ ಕಚೇರಿಯಲ್ಲಿ ಶುಕ್ರವಾರ ದಾಖಲಿಸಿಕೊಳ್ಳಲಾಗಿದೆ.
ಸಿಂಗ್ ಅವರು ಆಗಿನ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಮಾಡಿರುವ ಆರೋಪಗಳು ಸೇರಿದಂತೆ ಪ್ರಕರಣದ ವಿವಿಧ ಅಂಶಗಳ ಬಗ್ಗೆ ಸುಮಾರು ಐದು ಗಂಟೆಗಳ ಕಾಲ ಪ್ರಶ್ನಿಸಲಾಯಿತು.