ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣಕಾಸು ಅಕ್ರಮ ಆರೋಪ: ಮೆಹಬೂಬಾ ಮುಫ್ತಿ ತಾಯಿಗೆ ಜಾರಿ ನಿರ್ದೇಶನಾಲಯ ಸಮನ್ಸ್

Last Updated 6 ಜುಲೈ 2021, 13:49 IST
ಅಕ್ಷರ ಗಾತ್ರ

ಶ್ರೀನಗರ: ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು–ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ತಾಯಿ ಗುಲ್ಶಾನ್‌ ನಜೀರ್‌ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. ಶ್ರೀನಗರದಲ್ಲಿರುವ ಕಚೇರಿಗೆ ಜುಲೈ 14ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕ್ಷೇತ್ರಗಳ ಪುನರ್‌ ವಿಂಗಡಣಾ ಆಯೋಗವನ್ನು ಭೇಟಿ ಮಾಡದಿರಲು ಪಿಡಿಪಿ ನಿರ್ಧರಿಸಿದ ಬೆನ್ನಲ್ಲೇ ತಮ್ಮ ತಾಯಿಯವರಿಗೆ ಸಮನ್ಸ್ ನೀಡಿರುವ ಬಗ್ಗೆ ಮೆಹಬೂಬಾ ಮುಫ್ತಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಸಮನ್ಸ್‌ ಪ್ರತಿಯನ್ನು ಲಗತ್ತಿಸಿ ಟ್ವೀಟ್ ಮಾಡಿರುವ ಮುಫ್ತಿ, ‘ನನ್ನ ತಾಯಿಗೆ ತಿಳಿಯದೇ ಇರುವ ಆರೋಪಗಳಿಗಾಗಿ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ರಾಜಕೀಯ ವಿರೋಧಿಗಳನ್ನು ಬೆದರಿಸುವ ಯತ್ನದಲ್ಲಿ ಕೇಂದ್ರ ಸರ್ಕಾರವು ಹಿರಿಯ ನಾಗರಿಕರನ್ನೂ ಬಿಡುತ್ತಿಲ್ಲ. ಎನ್‌ಐಎ, ಇ.ಡಿಯಂತಹ ಏಜೆನ್ಸಿಗಳು ಕೇಂದ್ರ ಸರ್ಕಾರದ ಕೈಗೊಂಬೆಗಳಾಗಿವೆ’ ಎಂದು ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT