<p class="title"><strong>ನವದೆಹಲಿ</strong>: ಪೆಗಾಸಸ್ ಗೂಢಚರ್ಯೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಬೇಕು ಎಂದು ಕೋರಿ ಭಾರತೀಯ ಸಂಪಾದಕರ ಮಂಡಳಿಯು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.</p>.<p class="title">ಇಸ್ರೇಲ್ನ ಸಂಸ್ಥೆ ಎನ್ಎಸ್ಒದ ಪೆಗಾಸಸ್ ತಂತ್ರಾಂಶವನ್ನು ಬಳಸಿ ಆಯ್ದ ಪತ್ರಕರ್ತರು ಮತ್ತು ಇತರರ ಚಲನವಲನವನ್ನು ಕೇಂದ್ರ ಸರ್ಕಾರ ಗಮನಿಸಿದೆ ಎಂಬ ಆರೋಪಗಳಿವೆ.</p>.<p>ಜನರಿಗೆ ಮಾಹಿತಿ ಒದಗಿಸುವ, ವಿಶ್ವಾಸಾರ್ಹತೆ ಮತ್ತು ಸರ್ಕಾರ ಮುಕ್ತ, ಪಾರದರ್ಶಕವಾಗಿರಬೇಕು ಎಂಬ ಜನರ ಹಕ್ಕು ಸಾಕಾರಗೊಳಿಸುವ ಕಾರ್ಯವನ್ನು ಪತ್ರಕರ್ತರು ನಿಭಾಯಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<p>ಉತ್ತರಾದಾಯಿತ್ವವುಳ್ಳ ಸರ್ಕಾರದ ಎಲ್ಲ ಇಲಾಖೆಗಳಿಂದ ಮಾಹಿತಿ, ವಿವರಣೆಯನ್ನು ಪಡೆಯುವ, ಸರ್ಕಾರದ ಕಾರ್ಯಕ್ರಮಗಳಿಗೆ ಸಾಂವಿಧಾನಿಕ ಸಮರ್ಥನೆಯ ಪಡೆಯುವ ಹೊಣೆ ಪತ್ರಕರ್ತರದ್ದಾಗಿದೆ ಎಂದೂ ಹೇಳಲಾಗಿದೆ.</p>.<p>ಪತ್ರಕರ್ತರ ಈ ಹೊಣೆಗಾರಿಕೆ ನಿಭಾಯಿಸಲು ಮಾಧ್ಯಮ ಸ್ವಾತಂತ್ರ್ಯದ ರಕ್ಷಣೆಯೂ ಅತ್ಯಗತ್ಯ ಎಂದು ಮಂಡಳಿಯು ಅರ್ಜಿಯಲ್ಲಿ ಪ್ರತಿಪಾದಿಸಿದೆ. ಪತ್ರಕರ್ತ ಮೃಣಾಲ್ ಪಾಂಡೆ ಅವರು ಸಹ ಅರ್ಜಿದಾರರಾಗಿದ್ದಾರೆ.</p>.<p>ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ಆಗಸ್ಟ್ 5ರಂದು ಇದಕ್ಕೆ ಸಂಬಂಧಿತ ಅರ್ಜಿಗಳನ್ನು ವಿಚಾರಣೆಗೆ ಎತ್ತಿಕೊಳ್ಳಲಿದೆ. ಹಿರಿಯ ಪತ್ರಕರ್ತರಾದ ಎನ್.ರಾಮ್, ಶಶಿಕುಮಾರ್ ಅವರೂ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು, ಹಾಲಿ ಅಥವಾ ವಿಶ್ರಾಂತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ತನಿಖೆಗೆ ಒತ್ತಾಯಿಸಿದ್ದಾರೆ.</p>.<p>ಎನ್ಎಸ್ಒದ ಪೆಗಾಸಸ್ ತಂತ್ರಾಂಶ ಬಳಸಿ ಗೂಢಚರ್ಯೆ ಮಾಡುವ ಪಟ್ಟಿಯಲ್ಲಿ ಭಾರತದ ಸುಮಾರು 300 ಮೊಬೈಲ್ ಸಂಖ್ಯೆಗಳಿವೆ ಎಂದು ಅಂತರರಾಷ್ಟ್ರೀಯ ಮಾಧ್ಯಮ ಒಕ್ಕೂಟ ಈಚೆಗೆ ವರದಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಪೆಗಾಸಸ್ ಗೂಢಚರ್ಯೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಬೇಕು ಎಂದು ಕೋರಿ ಭಾರತೀಯ ಸಂಪಾದಕರ ಮಂಡಳಿಯು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.</p>.<p class="title">ಇಸ್ರೇಲ್ನ ಸಂಸ್ಥೆ ಎನ್ಎಸ್ಒದ ಪೆಗಾಸಸ್ ತಂತ್ರಾಂಶವನ್ನು ಬಳಸಿ ಆಯ್ದ ಪತ್ರಕರ್ತರು ಮತ್ತು ಇತರರ ಚಲನವಲನವನ್ನು ಕೇಂದ್ರ ಸರ್ಕಾರ ಗಮನಿಸಿದೆ ಎಂಬ ಆರೋಪಗಳಿವೆ.</p>.<p>ಜನರಿಗೆ ಮಾಹಿತಿ ಒದಗಿಸುವ, ವಿಶ್ವಾಸಾರ್ಹತೆ ಮತ್ತು ಸರ್ಕಾರ ಮುಕ್ತ, ಪಾರದರ್ಶಕವಾಗಿರಬೇಕು ಎಂಬ ಜನರ ಹಕ್ಕು ಸಾಕಾರಗೊಳಿಸುವ ಕಾರ್ಯವನ್ನು ಪತ್ರಕರ್ತರು ನಿಭಾಯಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<p>ಉತ್ತರಾದಾಯಿತ್ವವುಳ್ಳ ಸರ್ಕಾರದ ಎಲ್ಲ ಇಲಾಖೆಗಳಿಂದ ಮಾಹಿತಿ, ವಿವರಣೆಯನ್ನು ಪಡೆಯುವ, ಸರ್ಕಾರದ ಕಾರ್ಯಕ್ರಮಗಳಿಗೆ ಸಾಂವಿಧಾನಿಕ ಸಮರ್ಥನೆಯ ಪಡೆಯುವ ಹೊಣೆ ಪತ್ರಕರ್ತರದ್ದಾಗಿದೆ ಎಂದೂ ಹೇಳಲಾಗಿದೆ.</p>.<p>ಪತ್ರಕರ್ತರ ಈ ಹೊಣೆಗಾರಿಕೆ ನಿಭಾಯಿಸಲು ಮಾಧ್ಯಮ ಸ್ವಾತಂತ್ರ್ಯದ ರಕ್ಷಣೆಯೂ ಅತ್ಯಗತ್ಯ ಎಂದು ಮಂಡಳಿಯು ಅರ್ಜಿಯಲ್ಲಿ ಪ್ರತಿಪಾದಿಸಿದೆ. ಪತ್ರಕರ್ತ ಮೃಣಾಲ್ ಪಾಂಡೆ ಅವರು ಸಹ ಅರ್ಜಿದಾರರಾಗಿದ್ದಾರೆ.</p>.<p>ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ಆಗಸ್ಟ್ 5ರಂದು ಇದಕ್ಕೆ ಸಂಬಂಧಿತ ಅರ್ಜಿಗಳನ್ನು ವಿಚಾರಣೆಗೆ ಎತ್ತಿಕೊಳ್ಳಲಿದೆ. ಹಿರಿಯ ಪತ್ರಕರ್ತರಾದ ಎನ್.ರಾಮ್, ಶಶಿಕುಮಾರ್ ಅವರೂ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು, ಹಾಲಿ ಅಥವಾ ವಿಶ್ರಾಂತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ತನಿಖೆಗೆ ಒತ್ತಾಯಿಸಿದ್ದಾರೆ.</p>.<p>ಎನ್ಎಸ್ಒದ ಪೆಗಾಸಸ್ ತಂತ್ರಾಂಶ ಬಳಸಿ ಗೂಢಚರ್ಯೆ ಮಾಡುವ ಪಟ್ಟಿಯಲ್ಲಿ ಭಾರತದ ಸುಮಾರು 300 ಮೊಬೈಲ್ ಸಂಖ್ಯೆಗಳಿವೆ ಎಂದು ಅಂತರರಾಷ್ಟ್ರೀಯ ಮಾಧ್ಯಮ ಒಕ್ಕೂಟ ಈಚೆಗೆ ವರದಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>