ಬುಧವಾರ, ಮಾರ್ಚ್ 22, 2023
23 °C

‘ಆಜಾದ್ ಕಾಶ್ಮೀರ’ ಕುರಿತ ಪ್ರಶ್ನೆ: ಬಂಗಾಳದಿಂದ ವರದಿ ಕೇಳಿದ ಶಿಕ್ಷಣ ಸಚಿವಾಲಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: 10ನೇ ತರಗತಿಯ ಮಾದರಿ ಪ್ರಶ್ನೆಪತ್ರಿಕೆಯಲ್ಲಿ ವಿದ್ಯಾರ್ಥಿಗಳಿಗೆ ನಕ್ಷೆಯಲ್ಲಿ ‘ಆಜಾದ್ ಕಾಶ್ಮೀರ’  ಗುರುತಿಸುವಂತೆ ಕೇಳಿರುವ ಬಗ್ಗೆ ವಸ್ತುಸ್ಥಿತಿ ವರದಿ ನೀಡುವಂತೆ ಕೇಂದ್ರ ಶಿಕ್ಷಣ ಸಚಿವಾಲಯವು ಪಶ್ಚಿಮ ಬಂಗಾಳ ಸರ್ಕಾರಕ್ಕೆ  ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

‘ಪಶ್ಚಿಮ ಬಂಗಾಳ ಪ್ರೌಢ ಶಿಕ್ಷಣ ಮಂಡಳಿಯ 10ನೇ ತರಗತಿಯ ಪ್ರಶ್ನೆ ಪತ್ರಿಕೆಯಲ್ಲಿ ಈ ಬಗ್ಗೆ ಪ್ರಶ್ನೆ ಕೇಳಿರುವುದನ್ನು ಸಚಿವಾಲಯವು ಗಂಭೀರವಾಗಿ ಪರಿಗಣಿಸಿದೆ’ ಎಂದು ತಿಳಿಸಿವೆ. 

ಭಾರತದ ನಕ್ಷೆಯಲ್ಲಿ ‘ಆಜಾದ್ ಕಾಶ್ಮೀರ’ ಗುರುತಿಸುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ನಂತರ ರಾಜಕೀಯವಾಗಿ ಚರ್ಚೆಗಳು ಶುರುವಾಗಿವೆ. ಪ್ರತಿಪಕ್ಷ ಬಿಜೆಪಿ ಇದನ್ನು ‘ಜಿಹಾದಿ ಪಿತೂರಿ’ ಎಂದು ಆರೋಪಿಸಿದೆ.  

ಸ್ವಾಯತ್ತ ಸಂಸ್ಥೆ ಪ್ರಕಟಿಸಿದ ಪ್ರಶ್ನೆ ಪತ್ರಿಕೆಯಲ್ಲಿ ತಪ್ಪಾಗಿದೆ. ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಳ ಪ್ರೌಢ ಶಿಕ್ಷಣ ಮಂಡಳಿ ಅಧ್ಯಕ್ಷ ರಾಮಾನುಜ್ ಗಂಗೂಲಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು