<p><strong>ಭುವನೇಶ್ವರ:</strong> ಒಡಿಶಾದ ಮುಖ್ಯಮಂತ್ರಿ ನವೀನ್ ಪಾಟ್ನಾಯಕ್ ಅವರ ಬೆಂಗಾವಲು ವಾಹನದ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆಗಳನ್ನು ಎಸೆದಿದ್ದಾರೆ.</p>.<p>ಶಾಲಾ ಶಿಕ್ಷಕಿ ಮಮಿತಾ ಮೆಹರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಜೊತೆ ಸಂಬಂಧ ಹೊಂದಿರುವ ಆರೋಪ ಎದುರಿಸುತ್ತಿರುವ ಗೃಹ ಸಚಿವ ದಿವ್ಯ ಶಂಕರ್ ಮಿಶ್ರಾ ಅವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿಮೊಟ್ಟೆ ದಾಳಿ ನಡೆಸಲಾಗಿದೆ.</p>.<p>ಪುರಿ ನಗರದ ಸರ್ಕಾರಿ ಆಸ್ಪತ್ರೆಯ ಬಳಿ ಮೊಟ್ಟೆ ದಾಳಿ ನಡೆದಿದೆ. ಸಿಎಂ ನವೀನ್ ಪಾಟ್ನಾಯಕ್ ಅವರು ಜಗನ್ನಾಥ ದೇವಸ್ಥಾನದ ಹೆರಿಟೇಜ್ ಕಾರಿಡಾರ್ ಯೋಜನೆಗೆ ಅಡಿಗಲ್ಲು ಹಾಕುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭುವನೇಶ್ವರಕ್ಕೆ ವಾಪಸ್ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.</p>.<p>ಭಾರತೀಯ ಜನತಾ ಯುವ ಮೋರ್ಚಾ(ಬಿಜೆವೈಎಂ) ಬೆಂಬಲಿಗರು ಇದ್ದಕ್ಕಿದ್ದಂತೆ ಆಗಮಿಸಿ, ಬಿಗಿಭದ್ರತೆಯಲ್ಲಿ ಸಂಚರಿಸುತ್ತಿದ್ದಸಿಎಂ ಅವರನ್ನು ಗುರಿಯಾಗಿಸಿ ಬೆಂಗಾವಲು ವಾಹನಗಳ ಮೇಲೆ ಮೊಟ್ಟೆ ಎಸೆದಿದ್ದಾರೆ.</p>.<p>'ಪುರಿ ಜಿಲ್ಲೆಯಲ್ಲಿ ಮೊಟ್ಟೆಗಳನ್ನು ಎಸೆದಿದ್ದು ಹಾಗೂ ಕಪ್ಪು ಬಾವುಟ ತೋರಿಸಿದ್ದು ನಮ್ಮ ಕಾರ್ಯಕರ್ತರು. ಮುಖ್ಯಮಂತ್ರಿ ಹೋದ ಕಡೆಗಳಲ್ಲೆಲ್ಲ ನಾವು ಹೋಗುತ್ತೇವೆ. ಉಗ್ರವಾಗಿ ಪ್ರತಿಭಟಿಸುತ್ತೇವೆ. ಕಳಂಕಿತ ಮಂತ್ರಿಗಳನ್ನು ಸುಂಪುಟದಿಂದ ಕೈಬಿಡುವ ತನಕ ಹೋರಾಟ ಮುಂದುವರಿಸುತ್ತೇವೆ' ಎಂದು ಬಿಜೆವೈಎಂ ರಾಜ್ಯಾಧ್ಯಕ್ಷ ಈರಾಶಿಶ್ ಆಚಾರ್ಯ ಪ್ರತಿಕ್ರಿಯಿಸಿದ್ದಾರೆ.</p>.<p>ಬುಧವಾರ ಬೆಳಗ್ಗೆ ಮಾಲತಿಪಾಟಪುರದ ಸಮೀಪ ಸಚಿವ ವಿಕ್ರಮ್ ಕೇಸರಿ ಅರುಖಾ ಅವರ ವಾಹನದ ಮೇಲೆ ಮೊಟ್ಟೆ ದಾಳಿ ನಡೆದಿದೆ. ವಿಕ್ರಮ್ ಕೇಸರಿ ಅವರು ಜಗನ್ನಾಥ ದೇವಸ್ಥಾನದ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಒಡಿಶಾದ ಮುಖ್ಯಮಂತ್ರಿ ನವೀನ್ ಪಾಟ್ನಾಯಕ್ ಅವರ ಬೆಂಗಾವಲು ವಾಹನದ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆಗಳನ್ನು ಎಸೆದಿದ್ದಾರೆ.</p>.<p>ಶಾಲಾ ಶಿಕ್ಷಕಿ ಮಮಿತಾ ಮೆಹರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಜೊತೆ ಸಂಬಂಧ ಹೊಂದಿರುವ ಆರೋಪ ಎದುರಿಸುತ್ತಿರುವ ಗೃಹ ಸಚಿವ ದಿವ್ಯ ಶಂಕರ್ ಮಿಶ್ರಾ ಅವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿಮೊಟ್ಟೆ ದಾಳಿ ನಡೆಸಲಾಗಿದೆ.</p>.<p>ಪುರಿ ನಗರದ ಸರ್ಕಾರಿ ಆಸ್ಪತ್ರೆಯ ಬಳಿ ಮೊಟ್ಟೆ ದಾಳಿ ನಡೆದಿದೆ. ಸಿಎಂ ನವೀನ್ ಪಾಟ್ನಾಯಕ್ ಅವರು ಜಗನ್ನಾಥ ದೇವಸ್ಥಾನದ ಹೆರಿಟೇಜ್ ಕಾರಿಡಾರ್ ಯೋಜನೆಗೆ ಅಡಿಗಲ್ಲು ಹಾಕುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭುವನೇಶ್ವರಕ್ಕೆ ವಾಪಸ್ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.</p>.<p>ಭಾರತೀಯ ಜನತಾ ಯುವ ಮೋರ್ಚಾ(ಬಿಜೆವೈಎಂ) ಬೆಂಬಲಿಗರು ಇದ್ದಕ್ಕಿದ್ದಂತೆ ಆಗಮಿಸಿ, ಬಿಗಿಭದ್ರತೆಯಲ್ಲಿ ಸಂಚರಿಸುತ್ತಿದ್ದಸಿಎಂ ಅವರನ್ನು ಗುರಿಯಾಗಿಸಿ ಬೆಂಗಾವಲು ವಾಹನಗಳ ಮೇಲೆ ಮೊಟ್ಟೆ ಎಸೆದಿದ್ದಾರೆ.</p>.<p>'ಪುರಿ ಜಿಲ್ಲೆಯಲ್ಲಿ ಮೊಟ್ಟೆಗಳನ್ನು ಎಸೆದಿದ್ದು ಹಾಗೂ ಕಪ್ಪು ಬಾವುಟ ತೋರಿಸಿದ್ದು ನಮ್ಮ ಕಾರ್ಯಕರ್ತರು. ಮುಖ್ಯಮಂತ್ರಿ ಹೋದ ಕಡೆಗಳಲ್ಲೆಲ್ಲ ನಾವು ಹೋಗುತ್ತೇವೆ. ಉಗ್ರವಾಗಿ ಪ್ರತಿಭಟಿಸುತ್ತೇವೆ. ಕಳಂಕಿತ ಮಂತ್ರಿಗಳನ್ನು ಸುಂಪುಟದಿಂದ ಕೈಬಿಡುವ ತನಕ ಹೋರಾಟ ಮುಂದುವರಿಸುತ್ತೇವೆ' ಎಂದು ಬಿಜೆವೈಎಂ ರಾಜ್ಯಾಧ್ಯಕ್ಷ ಈರಾಶಿಶ್ ಆಚಾರ್ಯ ಪ್ರತಿಕ್ರಿಯಿಸಿದ್ದಾರೆ.</p>.<p>ಬುಧವಾರ ಬೆಳಗ್ಗೆ ಮಾಲತಿಪಾಟಪುರದ ಸಮೀಪ ಸಚಿವ ವಿಕ್ರಮ್ ಕೇಸರಿ ಅರುಖಾ ಅವರ ವಾಹನದ ಮೇಲೆ ಮೊಟ್ಟೆ ದಾಳಿ ನಡೆದಿದೆ. ವಿಕ್ರಮ್ ಕೇಸರಿ ಅವರು ಜಗನ್ನಾಥ ದೇವಸ್ಥಾನದ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>