<p class="title">ನವದೆಹಲಿ: ಪರಿಸರ ಪರಿಣಾಮ ಅಧ್ಯಯನ (ಇಐಎ) ಕರಡು ಪ್ರತಿಗೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನುತರಾಟೆಗೆ ತೆಗೆದುಕೊಂಡಿದ್ದು, ಪರಿಸರದ ಮೇಲಿನ ಪ್ರತಿಕೂಲ ಪರಿಣಾಮ ತಡೆಯಲು ಇದನ್ನುವಾಪಸು ಪಡೆಯಬೇಕು ಎಂದು ಆಗ್ರಹಪಡಿಸಿದ್ದಾರೆ.</p>.<p class="title">ಉದ್ದೇಶಿತ `ಇಐಎ 2020' ಕರಡು ಅಧಿಸೂಚನೆಯು ದೇಶವನ್ನು ಲೂಟಿ ಮಾಡುವ ನೆರವಾಗುವ ಉದ್ದೇಶ ಒಳಗೊಂಡಿರುವುದು ಸ್ಪಷ್ಟವಾಗಿದೆ ಎಂದು ಆರೋಪಿಸಿದ್ದಾರೆ. ದೇಶದ ಸಂಪನ್ಮೂಲ ಲೂಟಿ ಹೊಡೆಯಲು ಆಯ್ದ 'ಸ್ನೇಹಿತರಿಗೆ' ನೆರವಾಗಲು ಬಿಜೆಪಿ ಕೈಗೊಳ್ಳುತ್ತಿರುವ ಕ್ರಮಗಳಿಗೆ ಇದು ಇನ್ನೊಂದು ಉದಾಹರಣೆ ಎಂದು ವ್ಯಾಖ್ಯಾನಿಸಿದ್ದಾರೆ.</p>.<p class="title">ಇಐಎ 2020 ಕರಡನ್ನು ಖಂಡಿತವಾಗಿ ವಾಪಸು ಪಡೆಯಬೇಕು ಎಂದು ಈ ಸಂಬಂಧಿತ ಟ್ವೀಟ್ ನಲ್ಲಿ ಅವರು ಒತ್ತಾಯಿಸಿದ್ದಾರೆ.</p>.<p class="title">ಇಐಎ 2020 ಕರಡು ಅಧಿಸೂಚನೆಯ ಪ್ರಕಾರ, ವಿವಿಧ ಯೋಜನೆಗಳಿಗೆ ಪರಿಸರ ಸಂಬಂಧ ಸಾಧಕ-ಬಾಧಕ ಪರಿಶೀಲಿಸಿ ಅನುಮೋದನೆ ನೀಡುವ ಪ್ರಕ್ರಿಯೆಯನ್ನು ಒಳಗೊಂಡಿದೆ. ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿ ಪರಿಸರ ಸಚಿವಾಲಯವು ಕಳೆದ ಮಾರ್ಚ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿದೆ.</p>.<p class="title">ಸಾರ್ವಜನಿಕರ ಅಭಿಪ್ರಾಯ, ಆಕ್ಷೇಪ ಸಲ್ಲಿಸಲು ಮೊದಲು ಜೂನ್ 30ರವರೆಗೂ ಗಡುವು ನೀಡಿದ್ದ ಸಚಿವಾಲಯವು ಬಳಿಕ ಗಡುವನ್ನು ಆಗಸ್ಟ್ 12ರವರೆವಿಗೂ ವಿಸ್ತರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title">ನವದೆಹಲಿ: ಪರಿಸರ ಪರಿಣಾಮ ಅಧ್ಯಯನ (ಇಐಎ) ಕರಡು ಪ್ರತಿಗೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನುತರಾಟೆಗೆ ತೆಗೆದುಕೊಂಡಿದ್ದು, ಪರಿಸರದ ಮೇಲಿನ ಪ್ರತಿಕೂಲ ಪರಿಣಾಮ ತಡೆಯಲು ಇದನ್ನುವಾಪಸು ಪಡೆಯಬೇಕು ಎಂದು ಆಗ್ರಹಪಡಿಸಿದ್ದಾರೆ.</p>.<p class="title">ಉದ್ದೇಶಿತ `ಇಐಎ 2020' ಕರಡು ಅಧಿಸೂಚನೆಯು ದೇಶವನ್ನು ಲೂಟಿ ಮಾಡುವ ನೆರವಾಗುವ ಉದ್ದೇಶ ಒಳಗೊಂಡಿರುವುದು ಸ್ಪಷ್ಟವಾಗಿದೆ ಎಂದು ಆರೋಪಿಸಿದ್ದಾರೆ. ದೇಶದ ಸಂಪನ್ಮೂಲ ಲೂಟಿ ಹೊಡೆಯಲು ಆಯ್ದ 'ಸ್ನೇಹಿತರಿಗೆ' ನೆರವಾಗಲು ಬಿಜೆಪಿ ಕೈಗೊಳ್ಳುತ್ತಿರುವ ಕ್ರಮಗಳಿಗೆ ಇದು ಇನ್ನೊಂದು ಉದಾಹರಣೆ ಎಂದು ವ್ಯಾಖ್ಯಾನಿಸಿದ್ದಾರೆ.</p>.<p class="title">ಇಐಎ 2020 ಕರಡನ್ನು ಖಂಡಿತವಾಗಿ ವಾಪಸು ಪಡೆಯಬೇಕು ಎಂದು ಈ ಸಂಬಂಧಿತ ಟ್ವೀಟ್ ನಲ್ಲಿ ಅವರು ಒತ್ತಾಯಿಸಿದ್ದಾರೆ.</p>.<p class="title">ಇಐಎ 2020 ಕರಡು ಅಧಿಸೂಚನೆಯ ಪ್ರಕಾರ, ವಿವಿಧ ಯೋಜನೆಗಳಿಗೆ ಪರಿಸರ ಸಂಬಂಧ ಸಾಧಕ-ಬಾಧಕ ಪರಿಶೀಲಿಸಿ ಅನುಮೋದನೆ ನೀಡುವ ಪ್ರಕ್ರಿಯೆಯನ್ನು ಒಳಗೊಂಡಿದೆ. ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿ ಪರಿಸರ ಸಚಿವಾಲಯವು ಕಳೆದ ಮಾರ್ಚ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿದೆ.</p>.<p class="title">ಸಾರ್ವಜನಿಕರ ಅಭಿಪ್ರಾಯ, ಆಕ್ಷೇಪ ಸಲ್ಲಿಸಲು ಮೊದಲು ಜೂನ್ 30ರವರೆಗೂ ಗಡುವು ನೀಡಿದ್ದ ಸಚಿವಾಲಯವು ಬಳಿಕ ಗಡುವನ್ನು ಆಗಸ್ಟ್ 12ರವರೆವಿಗೂ ವಿಸ್ತರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>