ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಭದ್ರತಾ ಪಡೆ ಮೇಲೆ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಎಂಟು ನಾಗರಿಕರು ಗಾಯಗೊಂಡಿದ್ದಾರೆ.
ಶನಿವಾರ ಬೆಳಿಗ್ಗೆ 11.20ರ ಸುಮಾರಿಗೆ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡುಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಆದರೆ, ಅವರ ಗುರಿ ತಪ್ಪಿ, ಗ್ರೆನೇಡ್ ಮಾರುಕಟ್ಟೆಯೊಂದರಲ್ಲಿ ಸ್ಫೋಟಿಸಿದೆ. ಇದರಿಂದಾಗಿ 8 ನಾಗರಿಕರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಪರಿಸ್ಥಿತಿ ಸ್ಥಿರವಾಗಿದೆ. ದಾಳಿ ಬಳಿಕ ತಕ್ಷಣವೇ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.