<p><strong>ಹೈದರಾಬಾದ್</strong>: ಹಿಂದೂಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸ ಪಡೆಯುತ್ತಿದ್ದ ಎಂಟು ಮಂದಿ ಕೋವಿಡ್ ರೋಗಿಗಳು ಸೋಮವಾರ ಮೃತಪಟ್ಟಿದ್ದು, ಆಮ್ಲಜನಕದ ಸರಬರಾಜಿನಲ್ಲಿ ವ್ಯತ್ಯಯ ಆಗಿರುವುದೇ ಇವರ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ.</p>.<p>‘ತುರ್ತು ಸಂರ್ಭದಲ್ಲಿ ಬಳಸುವ ಸಲುವಾಗಿ ಆಸ್ಪತ್ರೆಯಲ್ಲಿ ಸಂಗ್ರಹಿಸಿಟ್ಟಿದ್ದ ಆಮ್ಲಜನಕದ ಸಿಲಿಂಡರ್ಗಳನ್ನು ಬಳಸಿ ರೋಗಿಗಳಿಗೆ ಆಮ್ಲಜನಕ ನೀಡಲು ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದರಿಂದ ಘಟನೆ ಸಂಭವಿಸಿದೆ’ ಎಂದು ಮೃತರ ಕುಟುಂಬದವರು ಆರೋಪಿಸಿದ್ದಾರೆ.</p>.<p>ಆದರೆ ಈ ಆರೋಪಗಳು ಸತ್ಯಕ್ಕೆ ದೂರವಾದವು ಎಂದು ಆಮ್ಲಜನಕ ಮೇಲ್ವಿಚಾರಣಾ ಅಧಿಕಾರಿಯಾಗಿರುವ ಅನಂತಪುರಂ ಜಿಲ್ಲಾ ಅರಣ್ಯ ರಕ್ಷಣಾಧಿಕಾರಿ ಜಗನ್ನಾಥ್ ಸಿಂಗ್ ಹೇಳಿದ್ದಾರೆ. ‘ರೋಗಿಗಳ ಸಾವಿಗೆ ಆಮ್ಲಜನಕದ ಕೊರತೆ ಕಾರಣವಲ್ಲ. ಈ ರೋಗಿಗಳ ಸ್ಥಿತಿ ತೀರಾ ಗಂಭೀರವಾಗಿತ್ತು. ಕೆಲವರ ಆಮ್ಲಜನಕದ ಪ್ರಮಾಣವು ಶೇ 50–60ರಷ್ಟಿತ್ತು’ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಹಿಂದೂಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸ ಪಡೆಯುತ್ತಿದ್ದ ಎಂಟು ಮಂದಿ ಕೋವಿಡ್ ರೋಗಿಗಳು ಸೋಮವಾರ ಮೃತಪಟ್ಟಿದ್ದು, ಆಮ್ಲಜನಕದ ಸರಬರಾಜಿನಲ್ಲಿ ವ್ಯತ್ಯಯ ಆಗಿರುವುದೇ ಇವರ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ.</p>.<p>‘ತುರ್ತು ಸಂರ್ಭದಲ್ಲಿ ಬಳಸುವ ಸಲುವಾಗಿ ಆಸ್ಪತ್ರೆಯಲ್ಲಿ ಸಂಗ್ರಹಿಸಿಟ್ಟಿದ್ದ ಆಮ್ಲಜನಕದ ಸಿಲಿಂಡರ್ಗಳನ್ನು ಬಳಸಿ ರೋಗಿಗಳಿಗೆ ಆಮ್ಲಜನಕ ನೀಡಲು ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದರಿಂದ ಘಟನೆ ಸಂಭವಿಸಿದೆ’ ಎಂದು ಮೃತರ ಕುಟುಂಬದವರು ಆರೋಪಿಸಿದ್ದಾರೆ.</p>.<p>ಆದರೆ ಈ ಆರೋಪಗಳು ಸತ್ಯಕ್ಕೆ ದೂರವಾದವು ಎಂದು ಆಮ್ಲಜನಕ ಮೇಲ್ವಿಚಾರಣಾ ಅಧಿಕಾರಿಯಾಗಿರುವ ಅನಂತಪುರಂ ಜಿಲ್ಲಾ ಅರಣ್ಯ ರಕ್ಷಣಾಧಿಕಾರಿ ಜಗನ್ನಾಥ್ ಸಿಂಗ್ ಹೇಳಿದ್ದಾರೆ. ‘ರೋಗಿಗಳ ಸಾವಿಗೆ ಆಮ್ಲಜನಕದ ಕೊರತೆ ಕಾರಣವಲ್ಲ. ಈ ರೋಗಿಗಳ ಸ್ಥಿತಿ ತೀರಾ ಗಂಭೀರವಾಗಿತ್ತು. ಕೆಲವರ ಆಮ್ಲಜನಕದ ಪ್ರಮಾಣವು ಶೇ 50–60ರಷ್ಟಿತ್ತು’ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>