ಆದರೆ ಈ ಆರೋಪಗಳು ಸತ್ಯಕ್ಕೆ ದೂರವಾದವು ಎಂದು ಆಮ್ಲಜನಕ ಮೇಲ್ವಿಚಾರಣಾ ಅಧಿಕಾರಿಯಾಗಿರುವ ಅನಂತಪುರಂ ಜಿಲ್ಲಾ ಅರಣ್ಯ ರಕ್ಷಣಾಧಿಕಾರಿ ಜಗನ್ನಾಥ್ ಸಿಂಗ್ ಹೇಳಿದ್ದಾರೆ. ‘ರೋಗಿಗಳ ಸಾವಿಗೆ ಆಮ್ಲಜನಕದ ಕೊರತೆ ಕಾರಣವಲ್ಲ. ಈ ರೋಗಿಗಳ ಸ್ಥಿತಿ ತೀರಾ ಗಂಭೀರವಾಗಿತ್ತು. ಕೆಲವರ ಆಮ್ಲಜನಕದ ಪ್ರಮಾಣವು ಶೇ 50–60ರಷ್ಟಿತ್ತು’ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.