<p><strong>ಬೆಟ್ಟಿಯಾ:</strong> ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಎಂಟು ಮಂದಿ ಗುರುವಾರ ಬೆಳಿಗ್ಗೆ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥಗೊಂಡಿದ್ದಾರೆ.</p>.<p>ಮೃತಪಟ್ಟವರೆಲ್ಲರೂ ತೆಲ್ಹುವಾ ಗ್ರಾಮದವರು. ಬುಧವಾರ ಸಂಜೆ ಚಮರ್ತೋಲಿ ಪ್ರದೇಶದಲ್ಲಿ ಮದ್ಯ ಸೇವಿಸಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.</p>.<p>ಮೃತಪಟ್ಟ ಎಂಟು ಮಂದಿಯನ್ನು ಗುರುತಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಉಪೇಂದ್ರ ನಾಥ್ ವರ್ಮಾ, ‘ಇದೊಂದು ಅಸಹಜ ಸಾವಿನ ಪ್ರಕರಣ. ಪ್ರಾಥಮಿಕ ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ’ ಎಂದು ಹೇಳಿದ್ದಾರೆ.</p>.<p>ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಮತ್ತು ಪೊಲೀಸರು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.</p>.<p>‘ಮದ್ಯ ಸೇವಿಸಿದ ನಂತರ ಜನರು ಅಸ್ವಸ್ಥಗೊಂಡರು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬೆಳಿಗ್ಗೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಇನ್ನುಳಿದವರು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಹೆಸರು ಬಯಸದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.</p>.<p>ಕಳೆದ ತಿಂಗಳು, ಮುಜಾಫರ್ಪುರದಲ್ಲಿ ಇದೇ ರೀತಿಯ ಘಟನೆಯಲ್ಲಿ ಎಂಟು ಜನರು ಸಾವನ್ನಪ್ಪಿದ್ದರು. ನಿತೀಶ್ ಕುಮಾರ್ ಸರ್ಕಾರವು 2016ರಏಪ್ರಿಲ್ 5ರಂದು ರಾಜ್ಯದಲ್ಲಿ ಮದ್ಯದ ತಯಾರಿಕೆ, ವ್ಯಾಪಾರ, ಸಂಗ್ರಹಣೆ, ಸಾಗಣೆ, ಮಾರಾಟ ಮತ್ತು ಸೇವನೆ ನಿಷೇಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಟ್ಟಿಯಾ:</strong> ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಎಂಟು ಮಂದಿ ಗುರುವಾರ ಬೆಳಿಗ್ಗೆ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥಗೊಂಡಿದ್ದಾರೆ.</p>.<p>ಮೃತಪಟ್ಟವರೆಲ್ಲರೂ ತೆಲ್ಹುವಾ ಗ್ರಾಮದವರು. ಬುಧವಾರ ಸಂಜೆ ಚಮರ್ತೋಲಿ ಪ್ರದೇಶದಲ್ಲಿ ಮದ್ಯ ಸೇವಿಸಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.</p>.<p>ಮೃತಪಟ್ಟ ಎಂಟು ಮಂದಿಯನ್ನು ಗುರುತಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಉಪೇಂದ್ರ ನಾಥ್ ವರ್ಮಾ, ‘ಇದೊಂದು ಅಸಹಜ ಸಾವಿನ ಪ್ರಕರಣ. ಪ್ರಾಥಮಿಕ ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ’ ಎಂದು ಹೇಳಿದ್ದಾರೆ.</p>.<p>ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಮತ್ತು ಪೊಲೀಸರು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.</p>.<p>‘ಮದ್ಯ ಸೇವಿಸಿದ ನಂತರ ಜನರು ಅಸ್ವಸ್ಥಗೊಂಡರು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬೆಳಿಗ್ಗೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಇನ್ನುಳಿದವರು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಹೆಸರು ಬಯಸದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.</p>.<p>ಕಳೆದ ತಿಂಗಳು, ಮುಜಾಫರ್ಪುರದಲ್ಲಿ ಇದೇ ರೀತಿಯ ಘಟನೆಯಲ್ಲಿ ಎಂಟು ಜನರು ಸಾವನ್ನಪ್ಪಿದ್ದರು. ನಿತೀಶ್ ಕುಮಾರ್ ಸರ್ಕಾರವು 2016ರಏಪ್ರಿಲ್ 5ರಂದು ರಾಜ್ಯದಲ್ಲಿ ಮದ್ಯದ ತಯಾರಿಕೆ, ವ್ಯಾಪಾರ, ಸಂಗ್ರಹಣೆ, ಸಾಗಣೆ, ಮಾರಾಟ ಮತ್ತು ಸೇವನೆ ನಿಷೇಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>