<p><strong>ಚೆನ್ನೈ:</strong> ತಮಿಳುನಾಡಿನ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು 1,000 ವರ್ಷಗಳಷ್ಟು ಹಳೆಯದಾದ 80 ದೇವಾಲಯಗಳನ್ನು ಜೀರ್ಣೋದ್ಧಾರ ಮಾಡಲು ನಿರ್ಧರಿಸಿದೆ.</p>.<p>'ರಾಜ್ಯ ಸರ್ಕಾರವು ಹಿಂದೂಗಳ ವಿರೋಧಿ ಅಲ್ಲ, ರಾಜಕೀಯ ಲಾಭಕ್ಕಾಗಿ ಇದನ್ನು ಮಾಡುತ್ತಿಲ್ಲ' ಎಂದು ಸಚಿವ ಪಿ.ಕೆ. ಶೇಖರ್ ಬಾಬು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ರಾಜ್ಯದ ಆರು ದೇವಸ್ಥಾನಗಳಿಗೆ ₹ 27.70 ಕೋಟಿ ವೆಚ್ಚದಲ್ಲಿ ರಾಜಗೋಪುರ ನಿರ್ಮಾಣ ಮತ್ತು 10 ದೇವಸ್ಥಾನಗಳಲ್ಲಿ ‘ಅನ್ನದಾನ’ಆರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<p>₹ 11 ಕೋಟಿ ವೆಚ್ಚದಲ್ಲಿ 14 ದೇವಸ್ಥಾನಗಳಲ್ಲಿ ನೂತನ ಅನ್ನದಾನ ಭವನಗಳನ್ನು ನಿರ್ಮಿಸಲಾಗುವುದು ಮತ್ತು ಎಲ್ಲ ಭಕ್ತರಿಗೆ ಪ್ರಸಾದ ನೀಡುವ ಯೋಜನೆಯನ್ನು ಇನ್ನೂ ಐದು ದೇವಸ್ಥಾನಗಳಿಗೆ ವಿಸ್ತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.</p>.<p>ಕೋವಿಲ್ ಪಥಗಾಯ್ ಸುಂದರರಾಜ ಪೆರುಮಾಳ್ ದೇವಸ್ಥಾನದಲ್ಲಿ ಬೃಹತ್ ಗೋಶಾಲೆಯನ್ನು ಸ್ಥಾಪಿಸಲಾಗುವುದು ಮತ್ತು ಈ ಯೋಜನೆಗೆ ₹ 20 ಕೋಟಿ ಮೀಸಲಿಡಲಾಗಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಇದರೊಂದಿಗೆ ಇಲಾಖೆಯು ಈಗಿರುವ 121 ಗೋಶಾಲೆಗಳನ್ನು 20 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಿದೆ.</p>.<p>ಇದನ್ನೂ ಓದಿ..<a href="https://www.prajavani.net/india-news/punjab-patialas-law-university-declared-hotspot-covid19-india-update-may-5th-2022-934210.html" itemprop="url">Covid-19 India Update: ಕೋವಿಡ್ ಹಾಟ್ಸ್ಪಾಟ್ ಆದ ಪಟಿಯಾಲದ ವಿಶ್ವವಿದ್ಯಾಲಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡಿನ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು 1,000 ವರ್ಷಗಳಷ್ಟು ಹಳೆಯದಾದ 80 ದೇವಾಲಯಗಳನ್ನು ಜೀರ್ಣೋದ್ಧಾರ ಮಾಡಲು ನಿರ್ಧರಿಸಿದೆ.</p>.<p>'ರಾಜ್ಯ ಸರ್ಕಾರವು ಹಿಂದೂಗಳ ವಿರೋಧಿ ಅಲ್ಲ, ರಾಜಕೀಯ ಲಾಭಕ್ಕಾಗಿ ಇದನ್ನು ಮಾಡುತ್ತಿಲ್ಲ' ಎಂದು ಸಚಿವ ಪಿ.ಕೆ. ಶೇಖರ್ ಬಾಬು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ರಾಜ್ಯದ ಆರು ದೇವಸ್ಥಾನಗಳಿಗೆ ₹ 27.70 ಕೋಟಿ ವೆಚ್ಚದಲ್ಲಿ ರಾಜಗೋಪುರ ನಿರ್ಮಾಣ ಮತ್ತು 10 ದೇವಸ್ಥಾನಗಳಲ್ಲಿ ‘ಅನ್ನದಾನ’ಆರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<p>₹ 11 ಕೋಟಿ ವೆಚ್ಚದಲ್ಲಿ 14 ದೇವಸ್ಥಾನಗಳಲ್ಲಿ ನೂತನ ಅನ್ನದಾನ ಭವನಗಳನ್ನು ನಿರ್ಮಿಸಲಾಗುವುದು ಮತ್ತು ಎಲ್ಲ ಭಕ್ತರಿಗೆ ಪ್ರಸಾದ ನೀಡುವ ಯೋಜನೆಯನ್ನು ಇನ್ನೂ ಐದು ದೇವಸ್ಥಾನಗಳಿಗೆ ವಿಸ್ತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.</p>.<p>ಕೋವಿಲ್ ಪಥಗಾಯ್ ಸುಂದರರಾಜ ಪೆರುಮಾಳ್ ದೇವಸ್ಥಾನದಲ್ಲಿ ಬೃಹತ್ ಗೋಶಾಲೆಯನ್ನು ಸ್ಥಾಪಿಸಲಾಗುವುದು ಮತ್ತು ಈ ಯೋಜನೆಗೆ ₹ 20 ಕೋಟಿ ಮೀಸಲಿಡಲಾಗಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಇದರೊಂದಿಗೆ ಇಲಾಖೆಯು ಈಗಿರುವ 121 ಗೋಶಾಲೆಗಳನ್ನು 20 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಿದೆ.</p>.<p>ಇದನ್ನೂ ಓದಿ..<a href="https://www.prajavani.net/india-news/punjab-patialas-law-university-declared-hotspot-covid19-india-update-may-5th-2022-934210.html" itemprop="url">Covid-19 India Update: ಕೋವಿಡ್ ಹಾಟ್ಸ್ಪಾಟ್ ಆದ ಪಟಿಯಾಲದ ವಿಶ್ವವಿದ್ಯಾಲಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>