ನವದೆಹಲಿ: ಸುಪ್ರೀಂ ಕೋರ್ಟ್ನಲ್ಲಿ ಚುನಾವಣಾ ಆಯೋಗವನ್ನು ಪ್ರತಿನಿಧಿಸುತ್ತಿದ್ದ ವಕೀಲ ಮೋಹಿತ್ ಡಿ. ರಾಮ್ ಅವರು ಈ ಹೊಣೆಗಾರಿಕೆಗೆ ರಾಜೀನಾಮೆ ನೀಡಿದ್ದಾರೆ. ಆಯೋಗದ
ಈಗಿನ ಕಾರ್ಯನಿರ್ವಹಣೆ ಮತ್ತು ತಮ್ಮ ಮೌಲ್ಯಗಳು ಹೊಂದಾಣಿಕೆ ಆಗುತ್ತಿಲ್ಲ. ಹಾಗಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಮೋಹಿತ್ ತಿಳಿಸಿದ್ದಾರೆ.
ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ವ್ಯಕ್ತಪಡಿಸುವ ಅಭಿಪ್ರಾಯಗಳನ್ನು ಮಾಧ್ಯಮಗಳು ವರದಿ ಮಾಡಬಾರದು ಎಂದು ಕೋರಿ ಆಯೋಗ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾ ಮಾಡಿತ್ತು. ಅದರ ಮರುದಿನವೇ ಮೋಹಿತ್ ಅವರು ಆಯೋಗದ ಪರ ವಕೀಲಿಕೆಯನ್ನು ಬಿಟ್ಟಿದ್ದಾರೆ.