ನವದೆಹಲಿ:ವಿಧಾನಸಭೆ ಚುನಾವಣೆಗೂ ಮುನ್ನ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆ ಕುರಿತು ವರದಿ ಸಲ್ಲಿಸಲು ಗುಜರಾತ್ ಸರ್ಕಾರ ವಿಫಲವಾಗಿದೆ ಎಂದುಚುನಾವಣೆ ಆಯೋಗ ಹೇಳಿದೆ.
ಗುಜರಾತ್ ಸರ್ಕಾರದ ನಡೆಯ ಬಗ್ಗೆ ಚುನಾವಣೆ ಆಯೋಗ ಅಸಮಾಧಾನ ವ್ಯಕ್ತಪಡಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರಿಂದ ವಿವರಣೆ ಕೇಳಿ ನೋಟಿಸ್ ನೀಡಿದೆ.
ಈ ಬಗ್ಗೆ ಪತ್ರ ಬರೆದಿರುವ ಆಯೋಗ ಹುದ್ದೆಗಳ ವರ್ಗಾವಣೆ ಮತ್ತು ನಿಯೋಜನೆ ಕುರಿತು ಶೀಘ್ರ ವರದಿ ಸಲ್ಲಿಸುವಂತೆ ಹೇಳಿದೆ. ನಿಗದಿತ ಗಡುವು ಮುಗಿದರೂ ಸರ್ಕಾರ ವರದಿ ಸಲ್ಲಿಸಿಲ್ಲ ಎಂದು ಹೇಳಿದೆ.
ವರದಿ ನೀಡಲು ವಿಳಂಬವಾಗಿರುವುದು ಏಕೆ ಎಂದು ವಿವರಣೆ ನೀಡುವಂತೆ ಆಯೋಗ ನೋಟಿಸ್ ನೀಡಿದೆ.