ರಾಜ್ಯದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳ ಅಧ್ಯಕ್ಷ– ಉಪಾಧ್ಯಕ್ಷ ಸ್ಥಾನದ ಮೀಸಲು ನಿಗದಿಪಡಿಸಿ ಸರ್ಕಾರ ಅಕ್ಟೋಬರ್ 8ರಂದು ಆದೇಶ ಹೊರಡಿಸಿತ್ತು. ಆದರೆ, ಹಾಸನ ಮತ್ತು ಅರಸೀಕೆರೆ ನಗರಸಭೆಗಳ ಮೀಸಲು ನಿಗದಿ ವೇಳೆ ರೋಟೇಷನ್ ಪದ್ಧತಿ ಅನುಸರಿಸಿಲ್ಲ ಎಂದು ದೂರಿ ದಿನೇಶ್ ಬಾಬು, ಚಂದ್ರೇಗೌಡ, ಪಂಕಜಾ ಹಾಗೂ ಸಮೀವುಲ್ಲಾ ಮತ್ತಿತರರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.