ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿತೀಶ್ ಕುಮಾರ್–ಪ್ರಶಾಂತ್ ಕಿಶೋರ್ ಭೇಟಿ ಗುಟ್ಟೇನು?

Last Updated 19 ಫೆಬ್ರುವರಿ 2022, 21:10 IST
ಅಕ್ಷರ ಗಾತ್ರ

ಪಟ್ನಾ: ರಾಜಕೀಯ ಕಾರ್ಯತಂತ್ರನಿಪುಣ ಪ್ರಶಾಂತ್ ಕಿಶೋರ್ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ದೆಹಲಿಯಲ್ಲಿ ಇತ್ತೀಚೆಗೆ ಭೇಟಿ ಮಾಡಿ ಮಾತುಕತೆ ನಡೆಸಿದರು ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

2020ರಲ್ಲಿ ಜೆಡಿಯುನಿಂದ ಪ್ರಶಾಂತ್ ಕಿಶೋರ್ ಅವರನ್ನು ಉಚ್ಚಾಟನೆ ಮಾಡಲಾಗಿತ್ತು. ಇದಾದ ಬಳಿಕ ಇದೇ ಮೊದಲ ಬಾರಿಗೆ ನಿತೀಶ್ ಜೊತೆ ಪ್ರಶಾಂತ್ ಕಿಶೋರ್ ಮಾತುಕತೆ ನಡೆಸಿದ್ದಾರೆ. ದೆಹಲಿಯಲ್ಲಿರುವ ಬಿಹಾರ ಮುಖ್ಯಮಂತ್ರಿಯವರ ಅಧಿಕೃತ ನಿವಾಸದಲ್ಲಿ ರಾತ್ರಿ ಊಟ ಮಾಡಿದ ಇಬ್ಬರೂ, ಎರಡು ತಾಸು ಚರ್ಚೆ ನಡೆಸಿರುವುದು ಕುತೂಹಲಕ್ಕೆ ಎಡೆಮಾಡಿದೆ. ಪ್ರಶಾಂತ್ ಭೇಟಿಯನ್ನು ನಿತೀಶ್ ಖಚಿತಪಡಿಸಿದ್ದರೂ, ಸಭೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ. ಇದೊಂದು ಸೌಜನ್ಯದ ಭೇಟಿ ಎಂದು ಪ್ರಶಾಂತ್ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT