ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು ವಿಧಾನಸಭಾ ಚುನಾವಣೆ: ಮುಗಿಯದ ಡಿಎಂಕೆ ಸೀಟು ಹಂಚಿಕೆ

Last Updated 4 ಮಾರ್ಚ್ 2021, 20:16 IST
ಅಕ್ಷರ ಗಾತ್ರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಕ್ಷೇತ್ರಗಳ ಹಂಚಿಕೆಯಲ್ಲಿ ಮಿತ್ರಪಕ್ಷ ಡಿಎಂಕೆ ತೆಗೆದುಕೊಂಡ ಕಠಿಣ ನಿಲುವು ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ತಮಿಳುನಾಡು ಕಾಂಗ್ರೆಸ್ ಸಮಿತಿಯು (ಟಿಎನ್‌ಸಿಸಿ) ಗುರುವಾರ ತನ್ನ ನಾಯಕರೊಂದಿಗೆ ತೀವ್ರ ಸಮಾಲೋಚನೆ ನಡೆಸಿತು.

25ಕ್ಕಿಂತ ಹೆಚ್ಚು ಸ್ಥಾನಗಳು ಸಿಗುವುದಿಲ್ಲ ಎಂದಾದರೆ ಮೈತ್ರಿಯಿಂದ ಹೊರಬರುವುದು ಒಳಿತು ಎಂಬ ಅಭಿಪ್ರಾಯವನ್ನು ಪಕ್ಷದ ಒಂದು ಗುಂಪು ಮುಂದಿಟ್ಟಿತು. ಆದರೆ 27 ಸೀಟುಗಳ ಪ್ರಸ್ತಾವ ಒಪ್ಪಿಕೊಳ್ಳುವುದು ಒಳಿತು ಎಂದು ಮತ್ತೊಂದು ಗುಂಪು ಅಭಿಪ್ರಾಯಪಟ್ಟಿದೆ.

ಎಐಸಿಸಿ ಉಸ್ತುವಾರಿ ದಿನೇಶ್ ಗುಂಡೂರಾವ್ ಅವರು ಪಕ್ಷದ ಮುಖಂಡರ ಜೊತೆ ಮಾತುಕತೆ ನಡೆಸಿದರು. ‘ಎರಡೂ ಪಕ್ಷಗಳು ತಮ್ಮ ನಿಲುವಿಗೆ ಅಂಟಿಕೊಂಡಿರುವುದು ಬಿಕ್ಕಟ್ಟು ಉಂಟು ಮಾಡಿದೆ. ಮೈತ್ರಿಯಲ್ಲಿ ಪರಸ್ಪರ ಗೌರವ ಇರಬೇಕು. ಜಾತ್ಯತೀತ ಪಕ್ಷಗಳು ಒಂದಾಗಬೇಕು ಎಂಬುದು ನಮ್ಮ ಉದ್ದೇಶ’ ಎಂದು ಗುಂಡೂರಾವ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ವಿಸಿಕೆಗೆ ಆರು ಸ್ಥಾನ ಹಂಚಿಕೆ

ತಮಿಳುನಾಡು ವಿಧಾನಸಭೆಯ ಆರು ಕ್ಷೇತ್ರಗಳಲ್ಲಿ ವಿಡುಥಲೈ ಚಿರುತೈಗಳ್‌ ಕಚ್ಚಿ (ವಿಸಿಕೆ) ಪಕ್ಷವು ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಮಿತ್ರಪಕ್ಷ ಡಿಎಂಕೆ ಜೊತೆಗಿನ ಸೀಟು ಹಂಚಿಕೆ ಒಪ್ಪಂದ ಅಂತಿಮವಾಗಿದೆ.

ತನಗೆ ಕೇವಲ ಆರು ಕ್ಷೇತ್ರಗಳನ್ನು ನೀಡುತ್ತಿರುವುದಕ್ಕೆ ವಿಸಿಕೆ ಬೇಸರ ವ್ಯಕ್ತಪಡಿಸಿತ್ತು. ಆದರೆ ಎಐಎಡಿಎಂಕೆ–ಬಿಜೆಪಿ ಮೈತ್ರಿಕೂಟವನ್ನು ಸೋಲಿಸಲು ಡಿಎಂಕೆ ಜೊತೆ ಕೈಜೋಡಿಸುತ್ತಿರುವುದಾಗಿ ಪಕ್ಷದ ಮುಖ್ಯಸ್ಥ ಟಿ.ತಿರುಮಾವಾಲವನ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT