ಮುಂಬೈ ನಗರ, ಉಪನಗರ, ಠಾಣೆ, ಪಾಲ್ಘಡ ಮತ್ತು ರಾಯಗಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.ಪರಿಣಾಮವಾಗಿ ಕೇಂದ್ರ ರೈಲ್ವೆ ಮತ್ತು ಪಶ್ಚಿಮ ರೈಲ್ವೆ ನಡುವಿನ ರೈಲು ಸಂಚಾರ ಅಸ್ತವ್ಯಸ್ತಗೊಂಡಿತು. ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಕೆಲವು ಪ್ರಯಾಣಿಕರು ರೈಲಿನಿಂದ ಇಳಿದು,ಹಳಿಗಳನ್ನು ದಾಟಿ ಬಸ್, ಆಟೊಗಳನ್ನು ಹಿಡಿಯುವತ್ತ ಹೆಜ್ಜೆ ಹಾಕಿದರು.