<p><strong>ಅಗರ್ತಲಾ:</strong> ಬಿಜೆಪಿಯ 9 ಶಾಸಕರು ಮತ್ತು ಮಿತ್ರ ಪಕ್ಷ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾದ (ಐಪಿಎಫ್ಟಿ) ಇಬ್ಬರು ಸೇರಿ ತ್ರಿಪುರಾದ 11 ಶಾಸಕರು ಸೋಮವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.</p>.<p>ಐಪಿಎಫ್ಟಿಯ ಮೇವರ್ ಕುಮಾರ್ ಜಮಾತಿಯ ಅವರನ್ನು ಹೊರತುಪಡಿಸಿ ವಿಪ್ಲಬ್ ಕುಮಾರ್ ದೇವ್ ಸಂಪುಟದಲ್ಲಿದ್ದ ಎಲ್ಲಾ ಸಚಿವರು ಹೊಸ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ವಿಪ್ಲವ್ ಕುಮಾರ್ ದೇವ್ ಸರ್ಕಾರದಲ್ಲಿ ಬುಡಕಟ್ಟು ಕಲ್ಯಾಣ ಸಚಿವರಾಗಿದ್ದ ಜಮಾತಿಯ ಮತ್ತು ಐಪಿಎಫ್ಟಿ ಪಕ್ಷದ ಮುಖ್ಯಸ್ಥ ಎನ್ಸಿ ದೆಬ್ಬರ್ಮಾ ನಡುವಿನ ಭಿನ್ನಾಭಿಪ್ರಾಯವು ಇತ್ತೀಚೆಗೆ ಮುಂಚೂಣಿಗೆ ಬಂದಿತ್ತು.</p>.<p>ಮುಖ್ಯಮಂತ್ರಿ ಮಾಣಿಕ್ ಸಾಹಾ, ಮಾಜಿ ಮುಖ್ಯಮಂತ್ರಿ ವಿಪ್ಲಬ್ ಕುಮಾರ್ ದೇವ್ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಎಸ್ಎನ್ ಆರ್ಯ ಅವರು ಸಂಪುಟ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.</p>.<p>‘ಜಿಷ್ಣು ದೇವ್ ವರ್ಮಾ, ಎನ್ಸಿ ದೆಬ್ಬರ್ಮಾ (ಐಪಿಎಫ್ಟಿ), ರತನ್ ಲಾಲ್ ನಾಥ್, ಪ್ರಣಜಿತ್ ಸಿಂಗ್ ರಾಯ್, ಮನೋಜ್ ಕಾಂತಿ ದೇಬ್, ಸಂತಾನಾ ಚಕ್ಮಾ, ರಾಮ್ ಪ್ರಸಾದ್ ಪಾಲ್, ಭಗವನ್ ದಾಸ್, ಸುಶಾಂತ ಚೌಧುರಿ, ರಾಮಪಾದ ಜಮಾತಿಯ ಮತ್ತು ಪ್ರೇಮ್ ಕುಮಾರ್ ರಿಯಾಂಗ್ (ಐಪಿಎಫ್ಟಿ) ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ’ಎಂದು ನೂತನ ಸಿಎಂ ಭಾನುವಾರ ರಾತ್ರಿ ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.</p>.<p>ಶನಿವಾರ ಸಂಜೆ ವಿಪ್ಲವ್ ಕುಮಾರ್ ದೇವ್ ಹಠಾತ್ ರಾಜೀನಾಮೆ ನೀಡಿದ ಬಳಿಕ ಸಾಹಾ ಅವರ ಹೆಸರನ್ನು ಮುಂದಿನ ಮುಖ್ಯಮಂತ್ರಿ ಎಂದು ಬಿಜೆಪಿ ಹೈಕಮಾಂಡ್ ಘೋಷಿಸಿತ್ತು. ಭಾನುವಾರ ಅವರು ಪ್ರಮಾಣವಚನ ಸ್ವೀಕರಿಸಿದ್ದರು.</p>.<p>ಇದನ್ನೂ ಓದಿ..<a href="https://www.prajavani.net/india-news/congress-chintan-shivir-sonia-gandhi-announces-bharat-jodo-yatra-in-october-udaipur-937084.html" itemprop="url">ಕಾಂಗ್ರೆಸ್ ಪಕ್ಷದ ಚಿಂತನ ಶಿಬಿರ ಸಮಾರೋಪ: ಭಾರತ ಜೋಡೋ ಯಾತ್ರೆಗೆ ‘ಕೈ’ ಸಜ್ಜು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಗರ್ತಲಾ:</strong> ಬಿಜೆಪಿಯ 9 ಶಾಸಕರು ಮತ್ತು ಮಿತ್ರ ಪಕ್ಷ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾದ (ಐಪಿಎಫ್ಟಿ) ಇಬ್ಬರು ಸೇರಿ ತ್ರಿಪುರಾದ 11 ಶಾಸಕರು ಸೋಮವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.</p>.<p>ಐಪಿಎಫ್ಟಿಯ ಮೇವರ್ ಕುಮಾರ್ ಜಮಾತಿಯ ಅವರನ್ನು ಹೊರತುಪಡಿಸಿ ವಿಪ್ಲಬ್ ಕುಮಾರ್ ದೇವ್ ಸಂಪುಟದಲ್ಲಿದ್ದ ಎಲ್ಲಾ ಸಚಿವರು ಹೊಸ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ವಿಪ್ಲವ್ ಕುಮಾರ್ ದೇವ್ ಸರ್ಕಾರದಲ್ಲಿ ಬುಡಕಟ್ಟು ಕಲ್ಯಾಣ ಸಚಿವರಾಗಿದ್ದ ಜಮಾತಿಯ ಮತ್ತು ಐಪಿಎಫ್ಟಿ ಪಕ್ಷದ ಮುಖ್ಯಸ್ಥ ಎನ್ಸಿ ದೆಬ್ಬರ್ಮಾ ನಡುವಿನ ಭಿನ್ನಾಭಿಪ್ರಾಯವು ಇತ್ತೀಚೆಗೆ ಮುಂಚೂಣಿಗೆ ಬಂದಿತ್ತು.</p>.<p>ಮುಖ್ಯಮಂತ್ರಿ ಮಾಣಿಕ್ ಸಾಹಾ, ಮಾಜಿ ಮುಖ್ಯಮಂತ್ರಿ ವಿಪ್ಲಬ್ ಕುಮಾರ್ ದೇವ್ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಎಸ್ಎನ್ ಆರ್ಯ ಅವರು ಸಂಪುಟ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.</p>.<p>‘ಜಿಷ್ಣು ದೇವ್ ವರ್ಮಾ, ಎನ್ಸಿ ದೆಬ್ಬರ್ಮಾ (ಐಪಿಎಫ್ಟಿ), ರತನ್ ಲಾಲ್ ನಾಥ್, ಪ್ರಣಜಿತ್ ಸಿಂಗ್ ರಾಯ್, ಮನೋಜ್ ಕಾಂತಿ ದೇಬ್, ಸಂತಾನಾ ಚಕ್ಮಾ, ರಾಮ್ ಪ್ರಸಾದ್ ಪಾಲ್, ಭಗವನ್ ದಾಸ್, ಸುಶಾಂತ ಚೌಧುರಿ, ರಾಮಪಾದ ಜಮಾತಿಯ ಮತ್ತು ಪ್ರೇಮ್ ಕುಮಾರ್ ರಿಯಾಂಗ್ (ಐಪಿಎಫ್ಟಿ) ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ’ಎಂದು ನೂತನ ಸಿಎಂ ಭಾನುವಾರ ರಾತ್ರಿ ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.</p>.<p>ಶನಿವಾರ ಸಂಜೆ ವಿಪ್ಲವ್ ಕುಮಾರ್ ದೇವ್ ಹಠಾತ್ ರಾಜೀನಾಮೆ ನೀಡಿದ ಬಳಿಕ ಸಾಹಾ ಅವರ ಹೆಸರನ್ನು ಮುಂದಿನ ಮುಖ್ಯಮಂತ್ರಿ ಎಂದು ಬಿಜೆಪಿ ಹೈಕಮಾಂಡ್ ಘೋಷಿಸಿತ್ತು. ಭಾನುವಾರ ಅವರು ಪ್ರಮಾಣವಚನ ಸ್ವೀಕರಿಸಿದ್ದರು.</p>.<p>ಇದನ್ನೂ ಓದಿ..<a href="https://www.prajavani.net/india-news/congress-chintan-shivir-sonia-gandhi-announces-bharat-jodo-yatra-in-october-udaipur-937084.html" itemprop="url">ಕಾಂಗ್ರೆಸ್ ಪಕ್ಷದ ಚಿಂತನ ಶಿಬಿರ ಸಮಾರೋಪ: ಭಾರತ ಜೋಡೋ ಯಾತ್ರೆಗೆ ‘ಕೈ’ ಸಜ್ಜು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>