ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದಲ್ಲಿ ಉಗ್ರರ ದಾಳಿ: ನಾಗರಿಕರೊಬ್ಬರ ಹತ್ಯೆ, ಇಬ್ಬರಿಗೆ ಗಾಯ

Last Updated 10 ಮೇ 2022, 13:24 IST
ಅಕ್ಷರ ಗಾತ್ರ

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಪಾಂಡೊಶನ್‌ ಪ್ರದೇಶದಲ್ಲಿ ಮಂಗಳವಾರ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವಿನ ಗುಂಡಿನ ದಾಳಿಯಲ್ಲಿ ನಾಗರಿಕರೊಬ್ಬರು ಮೃತಪಟ್ಟಿದ್ದು, ಯೋಧ ಸೇರಿ ಇಬ್ಬರು ಗಾಯಗೊಂಡಿದ್ದಾರೆ.

ಪಾಂಡೋಶನ್‌ ಪ್ರದೇಶದ ನಿವಾಸಿ ಶೋಯಿಬ್‌ ಯುಸೂಫ್‌ ದಾರ್‌ ಮೃತಪಟ್ಟವರು.

‘ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸೋಮವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಉಗ್ರರು ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಪಾಂಡೋಶನ್‌ ನಿವಾಸಿಗಳಾದ ಶೋಯಿಬ್‌ ಯುಸೂಫ್‌ ದಾರ್‌ ಹಾಗೂ ಶಾಹಿದ್‌ ಗನೈ ದಾರ್‌ ಹಾಗೂ ಭಾರತೀಯ ಸೇನೆಯ ಯೋಧ ಲ್ಯಾನ್ಸ್‌ ನಾಯಕ್‌ ಸಂಜು ದಾಸ್‌ ಗಾಯಗೊಂಡರು. ತಕ್ಷಣ ಮೂವರನ್ನು ಸೇನೆಯ ಆಸ್ಪತ್ರೆಗೆ ದಾಖಲಾಯಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ಶೋಯಿಬ್‌ ಯುಸೂಫ್‌ ದಾರ್‌ ಮೃತಪಟ್ಟರು’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT