ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರ: ಇಬ್ಬರು ಎಲ್‌ಇಟಿ ಉಗ್ರರ ಹತ್ಯೆ

Last Updated 10 ಏಪ್ರಿಲ್ 2022, 10:16 IST
ಅಕ್ಷರ ಗಾತ್ರ

ಶ್ರೀನಗರ: ಇಲ್ಲಿನ ಬಿಷೆಂಬರ್‌ ಪ್ರದೇಶದಲ್ಲಿ ಭಾನುವಾರ ಪಾಕಿಸ್ತಾನಿ ಲಷ್ಕರ್‌–ಎ–ತೈಬಾದ (ಎಲ್‌ಇಟಿ) ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.

ಹತ್ಯೆಯಾದ ಉಗ್ರರು ಕೆಲ ದಿನಗಳ ಹಿಂದೆ ಸಿಆರ್‌ಪಿಎಫ್‌ ಯೋಧರ ಕ್ಯಾಂಪ್‌ ಮೇಲೆ ದಾಳಿ ಮಾಡಿದ್ದರು ಎಂದು ರಕ್ಷಣಾ ಪಡೆ ವಕ್ತಾರರು ಮಾಹಿತಿ ನೀಡಿದ್ದಾರೆ.

ಬಿಷೆಂಬರ್‌ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಲಾಗಿತ್ತು. ಘಟನೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಭದ್ರತಾ ಪಡೆಯ ಮೂವರು ಯೋಧರಿಗೆ ಗಾಯಗಳಾಗಿವೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳದಿಂದ ಎಕೆ-47 ರೈಫಲ್, ಪಿಸ್ತೂಲ್‌ಗಳು, ಗ್ರೈನಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT