ಸಾಮಾಜಿ ಭದ್ರತಾ ಮಿಷನ್ ಮೂಲಕ ಸಂತ್ರಸ್ತರಿಗೆ ಮಾಸಿಕ ಪಿಂಚಣಿ, ಅವರನ್ನು ನೋಡಿಕೊಳ್ಳುವವರಿಗೆ ‘ಆಶ್ವಾಸಕಿರಣ’ ಪಿಂಚಣಿ, ₹ 3ಲಕ್ಷ ವರೆಗಿನ ಬ್ಯಾಂಕ್ ಸಾಲ ಮನ್ನಾ, ಸಾರಿಗೆ ಸೌಲಭ್ಯ, ಸಂತ್ರಸ್ತ ಮಕ್ಕಳಿಗೆ ವಿದ್ಯಾರ್ಥಿ ವೇತನ ಮತ್ತು ಉಚಿತ ಪಡಿತರ ಮೊದಲಾದ ಕ್ರಮಗಳನ್ನು ಸರ್ಕಾರ ಜಾರಿಗೊಳಿಸುತ್ತಿದೆ ಎಂದು ಅವರು ವಿವರ ನೀಡಿದರು.