₹100 ಕೋಟಿ ಮೌಲ್ಯದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಸಂಬಂಧ ಇಡಿ ಹಲವು ಬಾರಿ ಸಮನ್ಸ್ ನೀಡಿದ್ದು, ಅನಿಲ್ ದೇಶ್ಮುಖ್ ವಿಚಾರಣೆಗೆ ಹಾಜರಾಗುವುದರಿಂದ ತಪ್ಪಿಸಿಕೊಂಡಿದ್ದಾರೆ. ದೇಶದಿಂದ ದೇಶ್ಮುಖ್ ಪಲಾಯನ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ಲುಕ್ಔಟ್ ನೋಟಿಸ್ ಜಾರಿಯಾಗಿರುವುದಾಗಿ ವರದಿಯಾಗಿದೆ.