ಮುಂಬೈ: ಮಹಾರಾಷ್ಟ್ರ ಸಾರಿಗೆ ಸಚಿವ ಅನಿಲ್ ಪರಬ್ ಅವರಿಗೆ ಸಮನ್ಸ್ ನೀಡಿದ ಮರುದಿನವೇ(ಸೋಮವಾರ) ಆರ್ಟಿಒ ಅಧಿಕಾರಿ ಭಜರಂಗ್ ಖರ್ಮಾಟೆ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯವು(ಇ.ಡಿ) ಶೋಧ ನಡೆಸುತ್ತಿದೆ.
ಮಂಗಳವಾರ ಇ.ಡಿ ಮುಂದೆ ಹಾಜರಾಗುವಂತೆ ಸಚಿವ ಅನಿಲ್ ಪರಬ್ಗೆ ಸೂಚಿಸಲಾಗಿದೆ. ಸಾರಿಗೆ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿರುವ ಭಜರಂಗ್ ಖರ್ಮಾಟೆ ಅನಿಲ್ ಪರಬ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.
‘ಉದ್ಧವ್ ಠಾಕ್ರೆ ಕೆನ್ನೆಗೆ ಹೊಡೆಯುತ್ತಿದ್ದೆ’ ಎನ್ನುವ ರಾಣೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಪರಬ್, ರಾಣೆಯನ್ನು ಬಂಧಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ.
ಅನಿಲ್ ಪರಬ್ ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಪೊಲೀಸ್ ಅಧಿಕಾರಿ ಸಚಿನ್ ವಾಜೆ ಪ್ರಕರಣದಲ್ಲೂ ಪರಬ್ ಅವರ ವಿರುದ್ಧ ಆರೋಪ ಕೇಳಿಬಂದಿತ್ತು.