ಕೆಟಿಆರ್ ಶುಕ್ರವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ, ತೆಲಂಗಾಣದಿಂದ ಪಾಠ ಕಲಿಯಿರಿ. ಬನ್ನಿ, ನೋಡಿ ಮತ್ತು ಅನುಷ್ಠಾನಕ್ಕೆ ತನ್ನಿ. ತೆಲಂಗಾಣ ಮಾದರಿಯ ಅಭಿವೃದ್ಧಿ, ಕಾರ್ಯನೀತಿಗಳು, ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅಧ್ಯಯನ ಮಾಡಬೇಕು. ಡಬಲ್ ಇಂಜಿನ್ ಸರ್ಕಾರಗಳಿರುವ ರಾಜ್ಯಗಳಲ್ಲಿ ಅನುಷ್ಠಾನಕ್ಕೆ ತರಬಹುದು ಎಂದಿದ್ದಾರೆ.