<p><strong>ನವದೆಹಲಿ: </strong>‘ವಕೀಲ ಹಾಗೂ ನ್ಯಾಯಮೂರ್ತಿಯಾಗಿ ಸುಪ್ರೀಂ ಕೋರ್ಟ್ನಲ್ಲಿ ಸುಮಾರು 37 ವರ್ಷ ಕೆಲಸ ಮಾಡಿದ್ದೇನೆ. ಈ ಸುದೀರ್ಘ ಪಯಣವನ್ನು ಮನಸಾರೆ ಆನಂದಿಸಿದ್ದೇನೆ’ ಎಂದು ಸುಪ್ರೀಂ ಕೋರ್ಟ್ನ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ (ಯು.ಯು.ಲಲಿತ್) ಹೇಳಿದ್ದಾರೆ.</p>.<p>ಲಲಿತ್ ಅವರು ಮಂಗಳವಾರ ನಿವೃತ್ತರಾಗಲಿದ್ದಾರೆ. ಹೀಗಾಗಿ ವಕೀಲರ ಸಂಘವು ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ತಮ್ಮ ಪಯಣವನ್ನು ಮೆಲುಕು ಹಾಕಿದ್ದಾರೆ.</p>.<p>‘ಕೋರ್ಟ್ ಸಂಖ್ಯೆ 1ರ ಮೂಲಕ ಆರಂಭವಾಗಿದ್ದ ವೃತ್ತಿ ಬದುಕು ಈಗ ಇದೇ ನ್ಯಾಯಾಲಯದಲ್ಲಿ ಅಂತ್ಯಗೊಂಡಿದೆ. ಹಿರಿಯ ನ್ಯಾಯಮೂರ್ತಿಯಾಗಿರುವ ಡಿ.ವೈ.ಚಂದ್ರಚೂಡ್ ಅವರಿಗೆ ಅಧಿಕಾರ ಹಸ್ತಾಂತರ ಮಾಡುತ್ತಿರುವುದು ಹೆಮ್ಮೆಯ ವಿಚಾರ. ಈ ನ್ಯಾಯಾಲಯಕ್ಕೆ ಅಡಿ ಇಟ್ಟಿದ್ದಾಗ ಚಂದ್ರಚೂಡ್ ಅವರ ತಂದೆ ಯಶವಂತ್ ವಿಷ್ಣು ಚಂದ್ರಚೂಡ್ (ವೈ.ವಿ.ಚಂದ್ರಚೂಡ್) ಅವರು ಮುಖ್ಯ ನ್ಯಾಯಮೂರ್ತಿಗಳಾಗಿದ್ದರು’ ಎಂದು ಸ್ಮರಿಸಿದ್ದಾರೆ.</p>.<p>ಹಲವು ಸಾಂವಿಧಾನಿಕ ಪೀಠಗಳನ್ನು ರಚಿಸಿರುವ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಇದು ಅತ್ಯಂತ ಸ್ಮರಣೀಯ ಹಾಗೂ ತೃಪ್ತಿದಾಯಕ ಅನುಭವ’ ಎಂದಿದ್ದಾರೆ.</p>.<p>‘ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾಗುವವರು ಎಲ್ಲಾ ಅರ್ಹತೆಗಳನ್ನು ಹೊಂದಿರುತ್ತಾರೆ. ಸಾಂವಿಧಾನಿಕ ಪೀಠದ ಭಾಗವಾಗುವುದಕ್ಕೆ ಎಲ್ಲರಿಗೂ ಸಮಾನ ಅವಕಾಶ ಇರುತ್ತದೆ’ ಎಂದು ತಿಳಿಸಿದ್ದಾರೆ.</p>.<p>ನಿಯೋಜಿತ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ‘ಲಲಿತ್ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಹಲವು ಸುಧಾರಣೆಗಳನ್ನು ಮಾಡಿದ್ದಾರೆ. ಅವರ ಕೆಲಸಗಳನ್ನು ನಾವು ಮುಂದುವರಿಸಿಕೊಂಡು ಹೋಗುತ್ತೇವೆ’ ಎಂದು ಭರವಸೆ ನೀಡಿದ್ದಾರೆ.</p>.<p>‘ಲಲಿತ್ ಅವರನ್ನು ಬಹಳ ಕಾಲದಿಂದ ಬಲ್ಲೆ. ಕೇವಲ ಒಂದು ವಿಚಾರದಲ್ಲಿ ಮಾತ್ರ ನಾನು ಅವರ ನಿಲುವನ್ನು ವಿರೋಧಿಸಿದ್ದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ವಕೀಲ ಹಾಗೂ ನ್ಯಾಯಮೂರ್ತಿಯಾಗಿ ಸುಪ್ರೀಂ ಕೋರ್ಟ್ನಲ್ಲಿ ಸುಮಾರು 37 ವರ್ಷ ಕೆಲಸ ಮಾಡಿದ್ದೇನೆ. ಈ ಸುದೀರ್ಘ ಪಯಣವನ್ನು ಮನಸಾರೆ ಆನಂದಿಸಿದ್ದೇನೆ’ ಎಂದು ಸುಪ್ರೀಂ ಕೋರ್ಟ್ನ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ (ಯು.ಯು.ಲಲಿತ್) ಹೇಳಿದ್ದಾರೆ.</p>.<p>ಲಲಿತ್ ಅವರು ಮಂಗಳವಾರ ನಿವೃತ್ತರಾಗಲಿದ್ದಾರೆ. ಹೀಗಾಗಿ ವಕೀಲರ ಸಂಘವು ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ತಮ್ಮ ಪಯಣವನ್ನು ಮೆಲುಕು ಹಾಕಿದ್ದಾರೆ.</p>.<p>‘ಕೋರ್ಟ್ ಸಂಖ್ಯೆ 1ರ ಮೂಲಕ ಆರಂಭವಾಗಿದ್ದ ವೃತ್ತಿ ಬದುಕು ಈಗ ಇದೇ ನ್ಯಾಯಾಲಯದಲ್ಲಿ ಅಂತ್ಯಗೊಂಡಿದೆ. ಹಿರಿಯ ನ್ಯಾಯಮೂರ್ತಿಯಾಗಿರುವ ಡಿ.ವೈ.ಚಂದ್ರಚೂಡ್ ಅವರಿಗೆ ಅಧಿಕಾರ ಹಸ್ತಾಂತರ ಮಾಡುತ್ತಿರುವುದು ಹೆಮ್ಮೆಯ ವಿಚಾರ. ಈ ನ್ಯಾಯಾಲಯಕ್ಕೆ ಅಡಿ ಇಟ್ಟಿದ್ದಾಗ ಚಂದ್ರಚೂಡ್ ಅವರ ತಂದೆ ಯಶವಂತ್ ವಿಷ್ಣು ಚಂದ್ರಚೂಡ್ (ವೈ.ವಿ.ಚಂದ್ರಚೂಡ್) ಅವರು ಮುಖ್ಯ ನ್ಯಾಯಮೂರ್ತಿಗಳಾಗಿದ್ದರು’ ಎಂದು ಸ್ಮರಿಸಿದ್ದಾರೆ.</p>.<p>ಹಲವು ಸಾಂವಿಧಾನಿಕ ಪೀಠಗಳನ್ನು ರಚಿಸಿರುವ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಇದು ಅತ್ಯಂತ ಸ್ಮರಣೀಯ ಹಾಗೂ ತೃಪ್ತಿದಾಯಕ ಅನುಭವ’ ಎಂದಿದ್ದಾರೆ.</p>.<p>‘ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾಗುವವರು ಎಲ್ಲಾ ಅರ್ಹತೆಗಳನ್ನು ಹೊಂದಿರುತ್ತಾರೆ. ಸಾಂವಿಧಾನಿಕ ಪೀಠದ ಭಾಗವಾಗುವುದಕ್ಕೆ ಎಲ್ಲರಿಗೂ ಸಮಾನ ಅವಕಾಶ ಇರುತ್ತದೆ’ ಎಂದು ತಿಳಿಸಿದ್ದಾರೆ.</p>.<p>ನಿಯೋಜಿತ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ‘ಲಲಿತ್ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಹಲವು ಸುಧಾರಣೆಗಳನ್ನು ಮಾಡಿದ್ದಾರೆ. ಅವರ ಕೆಲಸಗಳನ್ನು ನಾವು ಮುಂದುವರಿಸಿಕೊಂಡು ಹೋಗುತ್ತೇವೆ’ ಎಂದು ಭರವಸೆ ನೀಡಿದ್ದಾರೆ.</p>.<p>‘ಲಲಿತ್ ಅವರನ್ನು ಬಹಳ ಕಾಲದಿಂದ ಬಲ್ಲೆ. ಕೇವಲ ಒಂದು ವಿಚಾರದಲ್ಲಿ ಮಾತ್ರ ನಾನು ಅವರ ನಿಲುವನ್ನು ವಿರೋಧಿಸಿದ್ದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>