<p><strong>ಭುವನೇಶ್ವರ</strong>: ರಾಜ್ಯಕ್ಕೆ ಸಮರ್ಪಕ ಪ್ರಮಾಣದಲ್ಲಿ ರಸಗೊಬ್ಬರ ಪೂರೈಸುವಂತೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಖಾರಿಫ್ ಕೃಷಿ ಅವಧಿಯಲ್ಲಿ ರೈತರು ರಸಗೊಬ್ಬರದ ಕೊರತೆಯನ್ನು ಎದುರಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p>.<p>ಈ ಕುರಿತು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನ್ಸುಖ್ ಮಾಂಡವೀಯ ಅವರಿಗೆ ಪತ್ರ ಬರೆದಿರುವ ಅವರು, ರಸಗೊಬ್ಬರ ಕೊರತೆಯು ಹೆಚ್ಚಿನ ಜಿಲ್ಲೆಗಳಲ್ಲಿ ಅನಗತ್ಯವಾಗಿ ಕಾನೂನು ಸುವ್ಯವಸ್ಥೆಯ ಸಮಸ್ಯೆಗಳನ್ನು ತರಬಹುದು ಎಂದು ಅವರು ಉಲ್ಲೇಖಿಸಿದ್ದಾರೆ.</p>.<p>ಆದ್ದರಿಂದ, ಹಿಂಬಾಕಿಯೂ ಸೇರಿದಂತೆ ರಾಜ್ಯಕ್ಕೆ ಮಾಸಿಕವಾಗಿ ನಿಗದಿಯಾಗಿರುವಷ್ಟು ರಸಗೊಬ್ಬರ ಪೂರೈಸಲು ಕ್ರಮ ತೆಗೆದುಕೊಳ್ಳುವಂತೆ ಅವರು ಪತ್ರದಲ್ಲಿ ಕೋರಿದ್ದಾರೆ. ಮೇ, ಜೂನ್, ಜುಲೈನಲ್ಲಿ ರಸಗೊಬ್ಬರಕ್ಕೆ ಗರಿಷ್ಠ ಬೇಡಿಕೆಯತ್ತು. ಆದರೆ ಈ ಅವಧಿಯಲ್ಲಿ ಗೊಬ್ಬರ ಪೂರೈಕೆ ಪ್ರಮಾಣ ಕುಸಿದಿತ್ತು ಎಂಬುದನ್ನು ಅವರು ಪತ್ರದ ಮೂಲಕ ಕೇಂದ್ರ ಸಚಿವರ ಗಮನಕ್ಕೆ ತಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ರಾಜ್ಯಕ್ಕೆ ಸಮರ್ಪಕ ಪ್ರಮಾಣದಲ್ಲಿ ರಸಗೊಬ್ಬರ ಪೂರೈಸುವಂತೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಖಾರಿಫ್ ಕೃಷಿ ಅವಧಿಯಲ್ಲಿ ರೈತರು ರಸಗೊಬ್ಬರದ ಕೊರತೆಯನ್ನು ಎದುರಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p>.<p>ಈ ಕುರಿತು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನ್ಸುಖ್ ಮಾಂಡವೀಯ ಅವರಿಗೆ ಪತ್ರ ಬರೆದಿರುವ ಅವರು, ರಸಗೊಬ್ಬರ ಕೊರತೆಯು ಹೆಚ್ಚಿನ ಜಿಲ್ಲೆಗಳಲ್ಲಿ ಅನಗತ್ಯವಾಗಿ ಕಾನೂನು ಸುವ್ಯವಸ್ಥೆಯ ಸಮಸ್ಯೆಗಳನ್ನು ತರಬಹುದು ಎಂದು ಅವರು ಉಲ್ಲೇಖಿಸಿದ್ದಾರೆ.</p>.<p>ಆದ್ದರಿಂದ, ಹಿಂಬಾಕಿಯೂ ಸೇರಿದಂತೆ ರಾಜ್ಯಕ್ಕೆ ಮಾಸಿಕವಾಗಿ ನಿಗದಿಯಾಗಿರುವಷ್ಟು ರಸಗೊಬ್ಬರ ಪೂರೈಸಲು ಕ್ರಮ ತೆಗೆದುಕೊಳ್ಳುವಂತೆ ಅವರು ಪತ್ರದಲ್ಲಿ ಕೋರಿದ್ದಾರೆ. ಮೇ, ಜೂನ್, ಜುಲೈನಲ್ಲಿ ರಸಗೊಬ್ಬರಕ್ಕೆ ಗರಿಷ್ಠ ಬೇಡಿಕೆಯತ್ತು. ಆದರೆ ಈ ಅವಧಿಯಲ್ಲಿ ಗೊಬ್ಬರ ಪೂರೈಕೆ ಪ್ರಮಾಣ ಕುಸಿದಿತ್ತು ಎಂಬುದನ್ನು ಅವರು ಪತ್ರದ ಮೂಲಕ ಕೇಂದ್ರ ಸಚಿವರ ಗಮನಕ್ಕೆ ತಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>