<p><strong>ಶ್ರೀನಗರ: </strong>ಜಮ್ಮು ಮತ್ತು ಕಾಶ್ಮೀರದಲ್ಲಿನ ವಿಶೇಷ ಸ್ಥಾನಮಾನವನ್ನು 2019ರಲ್ಲಿ ರದ್ದುಪಡಿಸಿದ ನಂತರ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ಫ್ರಾನ್ಸ್, ಯುರೋಪ್ ಒಕ್ಕೂಟ ಹಾಗೂ ಮಲೇಷ್ಯಾ ಸೇರಿದಂತೆ 24 ದೇಶಗಳ ರಾಜತಾಂತ್ರಿಕ ಅಧಿಕಾರಿಗಳು ಬುಧವಾರ ಕಣಿವೆ ರಾಜ್ಯಕ್ಕೆ ಬಂದಿಳಿದಿದ್ದಾರೆ.</p>.<p>ಎರಡು ದಿನಗಳ ಭೇಟಿಗಾಗಿ ಆಗಮಿಸಿರುವ ನಿಯೋಗದಲ್ಲಿ ಬ್ರೆಜಿಲ್, ಇಟಲಿ, ಫಿನ್ಲೆಂಡ್, ಬಾಂಗ್ಲಾದೇಶ, ಕ್ಯೂಬಾ, ಚಿಲಿ, ಪೋರ್ಚುಗಲ್, ನೆದರ್ಲೆಂಡ್ಸ್, ಬೆಲ್ಜಿಯಂ, ಸ್ಪೇನ್, ಸ್ವೀಡನ್, ಸೆನೆಗಲ್, ತಜಿಕಿಸ್ತಾನ್, ಕಿರ್ಗಿಸ್ತಾನ್, ಐರ್ಲೆಂಡ್, ಘಾನಾ, ಎಸ್ಟೋನಿಯಾ, ಬೊಲಿವಿಯಾ, ಮಾಲವಿ, ಎರಿಟ್ರಿಯಾ,ಐವರಿ ಕೋಸ್ಟ್ ರಾಷ್ಟ್ರಗಳ ರಾಜತಾಂತ್ರಿಕರು ಇದ್ದಾರೆ.</p>.<p>ನಿಯೋಗವನ್ನು ಬರಮಾಡಿಕೊಂಡ ಅಧಿಕಾರಿಗಳು, ಕಾಶ್ಮೀರದ ಕೇಂದ್ರಭಾಗ ಬುಡ್ಗಾಂನಲ್ಲಿರುವ ಸರ್ಕಾರಿ ಕಾಲೇಜಿಗೆ ಕರೆದೊಯ್ದರು. ಅಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಯ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.</p>.<p>ನಿಯೋಗದ ಸದಸ್ಯರು ಪಂಚರು ಮತ್ತು ಸರಪಂಚರ ಜತೆಗೆ ಕಣಿವೆಯಲ್ಲಿ ಮುಕ್ತವಾಗಿ ಪ್ರಯಾಣಿಸುತ್ತಾ, ಅವರ ಕುಂದುಕೊರತೆಗಳನ್ನು ಆಲಿಸಿದರು.</p>.<p>ಗುರುವಾರ ಜಮ್ಮುವಿಗೆ ಭೇಟಿ ನೀಡಿರಲಿರುವ ನಿಯೋಗದ ಸದಸ್ಯರು, ಅಲ್ಲಿ ಕೇಂದ್ರಾಡಳಿತ ಅಧಿಕಾರಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಜಿಲ್ಲಾ ಅಭಿವೃದ್ಧಿ ಮಂಡಳಿ ಸದಸ್ಯರು ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳನ್ನೂ ಭೇಟಿ ಮಾಡಲು ನಿರ್ಧರಿಸಿದ್ದಾರೆ.</p>.<p>ಅಲ್ಲದೇ, ದಾಲ್ ಸರೋವರದ ದಂಡೆಯಲ್ಲಿರುವ ಪವಿತ್ರ ಹಜರತ್ಬಲ್ ಮಂದಿರಕ್ಕೂ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಈ ಭೇಟಿ ಹಿನ್ನೆಲೆಯಲ್ಲಿ ಶ್ರೀನಗರ ಸೇರಿದಂತೆ ಕಣಿವೆಯ ಹಲವಡೆ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು. ಶ್ರೀನಗರದ ಕೆಲವು ಭಾಗಗಳಲ್ಲಿ ಅಂಗಡಿಮುಂಗಟ್ಟು ಮುಚ್ಚಲಾಗಿತ್ತು. ಲಾಲ್ಚೌಕ ಮತ್ತು ಸುತ್ತಮುತ್ತಲ ಪ್ರದೇಶದಲ್ಲೂ ಅಂಗಡಿಮುಂಗಟ್ಟು ಬಂದ್ ಮಾಡಲಾಗಿತ್ತು.</p>.<p>ನಿಯೋಗ ಸಾಗುವ ಮಾರ್ಗದುದ್ದಕ್ಕೂಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong>ಜಮ್ಮು ಮತ್ತು ಕಾಶ್ಮೀರದಲ್ಲಿನ ವಿಶೇಷ ಸ್ಥಾನಮಾನವನ್ನು 2019ರಲ್ಲಿ ರದ್ದುಪಡಿಸಿದ ನಂತರ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ಫ್ರಾನ್ಸ್, ಯುರೋಪ್ ಒಕ್ಕೂಟ ಹಾಗೂ ಮಲೇಷ್ಯಾ ಸೇರಿದಂತೆ 24 ದೇಶಗಳ ರಾಜತಾಂತ್ರಿಕ ಅಧಿಕಾರಿಗಳು ಬುಧವಾರ ಕಣಿವೆ ರಾಜ್ಯಕ್ಕೆ ಬಂದಿಳಿದಿದ್ದಾರೆ.</p>.<p>ಎರಡು ದಿನಗಳ ಭೇಟಿಗಾಗಿ ಆಗಮಿಸಿರುವ ನಿಯೋಗದಲ್ಲಿ ಬ್ರೆಜಿಲ್, ಇಟಲಿ, ಫಿನ್ಲೆಂಡ್, ಬಾಂಗ್ಲಾದೇಶ, ಕ್ಯೂಬಾ, ಚಿಲಿ, ಪೋರ್ಚುಗಲ್, ನೆದರ್ಲೆಂಡ್ಸ್, ಬೆಲ್ಜಿಯಂ, ಸ್ಪೇನ್, ಸ್ವೀಡನ್, ಸೆನೆಗಲ್, ತಜಿಕಿಸ್ತಾನ್, ಕಿರ್ಗಿಸ್ತಾನ್, ಐರ್ಲೆಂಡ್, ಘಾನಾ, ಎಸ್ಟೋನಿಯಾ, ಬೊಲಿವಿಯಾ, ಮಾಲವಿ, ಎರಿಟ್ರಿಯಾ,ಐವರಿ ಕೋಸ್ಟ್ ರಾಷ್ಟ್ರಗಳ ರಾಜತಾಂತ್ರಿಕರು ಇದ್ದಾರೆ.</p>.<p>ನಿಯೋಗವನ್ನು ಬರಮಾಡಿಕೊಂಡ ಅಧಿಕಾರಿಗಳು, ಕಾಶ್ಮೀರದ ಕೇಂದ್ರಭಾಗ ಬುಡ್ಗಾಂನಲ್ಲಿರುವ ಸರ್ಕಾರಿ ಕಾಲೇಜಿಗೆ ಕರೆದೊಯ್ದರು. ಅಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಯ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.</p>.<p>ನಿಯೋಗದ ಸದಸ್ಯರು ಪಂಚರು ಮತ್ತು ಸರಪಂಚರ ಜತೆಗೆ ಕಣಿವೆಯಲ್ಲಿ ಮುಕ್ತವಾಗಿ ಪ್ರಯಾಣಿಸುತ್ತಾ, ಅವರ ಕುಂದುಕೊರತೆಗಳನ್ನು ಆಲಿಸಿದರು.</p>.<p>ಗುರುವಾರ ಜಮ್ಮುವಿಗೆ ಭೇಟಿ ನೀಡಿರಲಿರುವ ನಿಯೋಗದ ಸದಸ್ಯರು, ಅಲ್ಲಿ ಕೇಂದ್ರಾಡಳಿತ ಅಧಿಕಾರಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಜಿಲ್ಲಾ ಅಭಿವೃದ್ಧಿ ಮಂಡಳಿ ಸದಸ್ಯರು ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳನ್ನೂ ಭೇಟಿ ಮಾಡಲು ನಿರ್ಧರಿಸಿದ್ದಾರೆ.</p>.<p>ಅಲ್ಲದೇ, ದಾಲ್ ಸರೋವರದ ದಂಡೆಯಲ್ಲಿರುವ ಪವಿತ್ರ ಹಜರತ್ಬಲ್ ಮಂದಿರಕ್ಕೂ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಈ ಭೇಟಿ ಹಿನ್ನೆಲೆಯಲ್ಲಿ ಶ್ರೀನಗರ ಸೇರಿದಂತೆ ಕಣಿವೆಯ ಹಲವಡೆ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು. ಶ್ರೀನಗರದ ಕೆಲವು ಭಾಗಗಳಲ್ಲಿ ಅಂಗಡಿಮುಂಗಟ್ಟು ಮುಚ್ಚಲಾಗಿತ್ತು. ಲಾಲ್ಚೌಕ ಮತ್ತು ಸುತ್ತಮುತ್ತಲ ಪ್ರದೇಶದಲ್ಲೂ ಅಂಗಡಿಮುಂಗಟ್ಟು ಬಂದ್ ಮಾಡಲಾಗಿತ್ತು.</p>.<p>ನಿಯೋಗ ಸಾಗುವ ಮಾರ್ಗದುದ್ದಕ್ಕೂಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>