ನವದೆಹಲಿ: ಕೋವಿಡ್–19 ಔಷಧಿ ವಿತರಣೆಗಳ ಕುರಿತು ದೆಹಲಿ ಹೈಕೋರ್ಟ್ನಿಂದ ತೀವ್ರ ಟೀಕೆ ಎದುರಿಸುತ್ತಿರುವ ಬಿಜೆಪಿಯ ಸಂಸದ ಗೌತಮ್ ಗಂಭೀರ್ ಅವರು, ತಮ್ಮ ವಿರುದ್ಧ ಸಾವಿರಾರು ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಗಳನ್ನು ಸಲ್ಲಿಸಿದರೂ, ಜನರ ಜೀವ ಉಳಿಸುವ ಕಾರ್ಯವನ್ನು ಮುಂದುವರಿಸುವುದಾಗಿ ಬುಧವಾರ ಹೇಳಿದ್ದಾರೆ.