ಮಂಗಳವಾರದ ಲೋಕಸಭೆ ಕಲಾಪ ವೇಳೆ ಮಾತನಾಡಿದ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಅವರು, '1948ರ ಜನಗಣತಿ ಕಾಯ್ದೆ ಪ್ರಕಾರ ರಾಜ್ಯ ಸರ್ಕಾರಗಳು ಜನಗಣತಿ ಅಧಿಕಾರಿಗಳನ್ನು ನೇಮಕ ಮಾಡಬೇಕು ಅಥವಾ ಜನಗಣತಿಯ ಮೇಲ್ವಿಚಾರಣೆ ನಡೆಸಬೇಕು. ಜನಗಣತಿ ಮತ್ತು ಎನ್ಪಿಆರ್ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಗಳ ಸಹಕಾರದೊಂದಿಗೆ ಕ್ರಮ ಕೈಗೊಳ್ಳಲಾಗಿದೆ' ಎಂದು ಹೇಳಿದರು.