‘ಗರ್ಭಾವಸ್ಥೆ ಅವಧಿಯು ಪ್ರತಿ ಮಹಿಳೆಗೂ ವಿಶೇಷ ಸಂದರ್ಭವಾಗಿದ್ದು, ಅದನ್ನು ಪ್ರಶಂಸಿಸಬೇಕಾಗಿದೆ. ಆದರೆ, ಬಂಧನದಲ್ಲಿರುವಾಗ ಮಗುವಿಗೆ ಜನ್ಮ ನೀಡುವುದು ತಾಯಿಗೆ ಆಘಾತವನ್ನುಂಟು ಮಾಡುತ್ತದೆ. ಅಷ್ಟೇ ಅಲ್ಲ, ಮಗುವಿನ ಜನನದ ಪ್ರಶ್ನೆ ಬಂದಾಗಲೆಲ್ಲಾ ಅದು ಮಗುವಿನ ಮೇಲೂ ಶಾಶ್ವತವಾದ ಪ್ರತಿಕೂಲ ಪರಿಣಾಮ ಬೀರುತ್ತದೆ. ಭಾರತದ ಸಂವಿಧಾನದ ಕಲಂ 21ರ ಅಡಿಯಲ್ಲಿ ಹೇಳಿರುವಂತೆ, ತಾಯ್ತನದ ಅವಧಿಯಲ್ಲಿ ಪ್ರತಿ ಗರ್ಭಿಣಿಯೂ ಘನತೆ ಮತ್ತು ಗೌರವದಿಂದ ಇರಲು ಅರ್ಹಳಾಗಿದ್ದಾಳೆ’ ಎಂದೂ ನ್ಯಾಯಾಲಯವು ಆಗಸ್ಟ್ 18ರ ತನ್ನ ಆದೇಶದಲ್ಲಿ ಹೇಳಿದೆ.