ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯು ರಾಜಸ್ಥಾನ ಪ್ರವೇಶಿಸುವ ಮುನ್ನ ಗೆಹಲೋತ್ ಹಾಗೂ ಪೈಲಟ್ ನಡುವಣ ಭಿನ್ನಮತ ಸ್ಫೋಟಗೊಂಡಿತ್ತು. ವೇಣುಗೋಪಾಲ್ ಅವರ ಮಧ್ಯಪ್ರವೇಶದಿಂದಾಗಿ ಇಬ್ಬರ ನಡುವಣ ತಿಕ್ಕಾಟವು ಅಲ್ಪಮಟ್ಟಿಗೆ ಶಮನಗೊಂಡಿತ್ತು. ವೇಣುಗೋಪಾಲ್, ಪೈಲಟ್ ಹಾಗೂ ಗೆಹಲೋತ್ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಮಾಧ್ಯಮಗಳ ಎದುರು ಒಗ್ಗಟ್ಟು ಪ್ರದರ್ಶಿಸಿದ್ದರು.