‘ಟ್ಯಾಕ್ಟರ್ ಕಳ್ಳತನ ಶಂಕೆಯ ಮೇರೆಗೆ ಮುಸ್ಲಿಂ ಸಮುದಾಯದವರು ಹಲ್ಲೆ ನಡೆಸಿ ಹತ್ಯೆ ಮಾಡಿರುವ ಚಿರಂಜಿಲಾಲ್ ಸೈನಿ ಎಂಬುವವರ ಮನೆಗೆ ಭೇಟಿ ನೀಡಿದ್ದ ವೇಳೆ ಶಾಸಕರು ದ್ವೇಷ ಹರಡುವ ಹೇಳಿಕೆ ನೀಡಿದ್ದರು. ಇದು ವಿಡಿಯೊದಲ್ಲಿ ದಾಖಲಾಗಿತ್ತು. ಈ ಕಾರಣಕ್ಕೆ ಪ್ರಕರಣ ದಾಖಲಿಸಿಕೊಂಡಿದ್ದೇವೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.