ಪೊಲೀಸ್ ಅಧಿಕಾರಿಗಳು ನಗರದ ಬಾರ್ ಮತ್ತು ರೆಸ್ಟೊರೆಂಟ್ಗಳಿಂದ ಪ್ರತಿ ತಿಂಗಳು ₹100 ಕೋಟಿ ಸಂಗ್ರಹಿಸಿ ಕೊಡಬೇಕು ಎಂದು ಗೃಹ ಸಚಿವ ಅನಿಲ್ ದೇಶಮುಖ್ ಸೂಚಿಸಿದ್ದಾರೆ ಎಂದು ಆರೋಪಿಸಿ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ವೀರ್ ಸಿಂಗ್ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಮಾರ್ಚ್ 20ರಂದು ಪತ್ರ ಬರೆದಿದ್ದರು. ಇದು ಮಹಾರಾಷ್ಟ್ರ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿತ್ತು.