‘ಕೊಲ್ಲಂನ ಪರಿಪಲ್ಲಿ ಮೆಡಿಕಲ್ ಕಾಲೇಜಿನಲ್ಲಿ ರಾಘವನ್ ಮತ್ತು ಅವರ ಕುಟುಂಬದ ಸದಸ್ಯರು ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ರಾಘವನ್ ಅವರ ಪರಿಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ವರ್ಗಾಯಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ರಾಘವನ್ ಅವರುಮಂಗಳವಾರ ಬೆಳಿಗ್ಗೆ 4.45ಕ್ಕೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು’ ಎಂದು ಮೂಲಗಳು ತಿಳಿಸಿವೆ.