ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಸಿಪಿಎಂ ಹಿರಿಯ ನಾಯಕ ಬಿ. ರಾಘವನ್‌ ನಿಧನ

Last Updated 23 ಫೆಬ್ರುವರಿ 2021, 9:33 IST
ಅಕ್ಷರ ಗಾತ್ರ

ತಿರುವನಂತಪುರ: ಸಿಪಿಐ(ಎಂ)ನ ಹಿರಿಯ ನಾಯಕ ಮತ್ತು ಮಾಜಿ ಶಾಸಕ ಬಿ. ರಾಘವನ್‌(69) ಅವರು ಕೋವಿಡ್‌ನಿಂದಾಗಿ ಮಂಗಳವಾರ ನಿಧನರಾದರು.

‘ಕೊಲ್ಲಂನ ಪರಿಪಲ್ಲಿ ಮೆಡಿಕಲ್‌ ಕಾಲೇಜಿನಲ್ಲಿ ರಾಘವನ್‌ ಮತ್ತು ಅವರ ಕುಟುಂಬದ ಸದಸ್ಯರು ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ರಾಘವನ್‌ ಅವರ ಪರಿಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಸರ್ಕಾರಿ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಗೆ ವರ್ಗಾಯಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ರಾಘವನ್‌ ಅವರುಮಂಗಳವಾರ ಬೆಳಿಗ್ಗೆ 4.45ಕ್ಕೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು’ ಎಂದು ಮೂಲಗಳು ತಿಳಿಸಿವೆ.

1987ರಲ್ಲಿ ನೆಡವತ್ತೂರು ಕ್ಷೇತ್ರದಿಂದ ಮೊದಲ ಬಾರಿ ಕೇರಳ ವಿಧಾನಸಭೆಗೆ ಆಯ್ಕೆಯಾಗಿದ್ದರು. ಬಳಿಕ 1991ರಲ್ಲಿ ಮತ್ತೆ ವಿಜಯ ಸಾಧಿಸಿದರು. ಆದರೆ 1996 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದರು. 2006ರಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT