ನವದೆಹಲಿ: ತಮಗಿರುವ ‘ಸ್ಟಾರ್ ಪ್ರಚಾರಕ’ ಸ್ಥಾನಮಾನ ತೆಗೆಯುವ ಚುನಾವಣಾ ಆಯೋಗದ ತೀರ್ಮಾನವನ್ನು ಪ್ರಶ್ನಿಸಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ರಾಜ್ಯ ವಿಧಾನಸಭೆಯ 28 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆಯ ಪ್ರಚಾರದ ವೇಳೆ ಕಮಲ್ನಾಥ್ ಅವರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಚುನಾವಣಾ ಆಯೋಗ ಈ ಕ್ರಮಕೈಗೊಂಡಿತ್ತು.
ಹಿರಿಯ ವಕೀಲ, ರಾಜ್ಯಸಭೆ ಸದಸ್ಯ ವಿವೇಕ್ ತಂಖಾ ಅವರು, ವಿವಿಧ ಕಾರಣಗಳನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ನಲ್ಲಿ ಆಯೋಗದ ಆದೇಶ ಪ್ರಶ್ನಿಸಿದ್ದು, ತುರ್ತಾಗಿ ವಿಚಾರಣೆಗೆ ತೆಗದುಕೊಳ್ಳಬೇಕು ಎಂದು ಕೋರಲಾಗಿದೆ ಎಂದರು.