ಶರದ್ ಯಾದವ್ ಅವರ ಪಾರ್ಥಿವ ಶರೀರವನ್ನು ದೆಹಲಿಯಿಂದ ಭೋಪಾಲ್ಗೆ ವಿಮಾನದ ಮೂಲಕ ತರಲಾಯಿತು. ಅಲ್ಲಿಂದ ರಸ್ತೆ ಮಾರ್ಗದಲ್ಲಿ ಅಂಖ್ಮವು ಗ್ರಾಮಕ್ಕೆ ಒಯ್ಯಲಾಯಿತು. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಸೇರಿದಂತೆ ಇತರರು ಅಂತಿಮ ದರ್ಶನ ಮಾಡಿದರು.