ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಉತ್ತರಾಖಂಡದ ಮಾಜಿ ಸಚಿವ ಆತ್ಮಹತ್ಯೆ

Last Updated 28 ಮೇ 2022, 3:09 IST
ಅಕ್ಷರ ಗಾತ್ರ

ಡೆಹ್ರಾಡೂನ್: ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಉತ್ತರಾಖಂಡದ ಮಾಜಿ ಸಚಿವ ರಾಜೇಂದ್ರ ಬಹುಗುಣ (59) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಲ್‌ದ್ವಾನಿ ನಗರದ ಭಗತ್‌ ಸಿಂಗ್ ಕಾಲೊನಿಯಲ್ಲಿ ನೀರಿನ ಟ್ಯಾಂಕ್‌ ಏರಿ ತಮಗೆ ತಾವೇ ಗುಂಡಿಕ್ಕಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೊಮ್ಮಗಳಿಗೆ ಕಿರುಕುಳ ನೀಡಿದ ಬಗ್ಗೆ ರಾಜೇಂದ್ರ ಬಹುಗುಣ ಅವರ ಸೊಸೆ ನೀಡಿದ್ದ ದೂರಿನ ಆಧಾರದಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು ಎಂದು ನೈನಿತಾಲ್‌ನ ಎಸ್‌ಎಸ್‌ಪಿ ಪಂಕಜ್ ಭಟ್ ತಿಳಿಸಿದ್ದಾರೆ.

ಸದ್ಯ ಬಹುಗುಣ ಅವರ ಪುತ್ರ ತಮ್ಮ ಪತ್ನಿ ವಿರುದ್ಧ ಪೊಲಿಸರಿಗೆ ದೂರು ನೀಡಿದ್ದು, ಆಕೆ ತಂದೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರು ಎಂದು ಆರೋಪಿಸಿದ್ದಾರೆ.

ರಾಜೇಂದ್ರ ಬಹುಗುಣ ಅವರು 2004–05 ರಲ್ಲಿ ಸಚಿವರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT