ಡೆಹ್ರಾಡೂನ್: ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಉತ್ತರಾಖಂಡದ ಮಾಜಿ ಸಚಿವ ರಾಜೇಂದ್ರ ಬಹುಗುಣ (59) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಲ್ದ್ವಾನಿ ನಗರದ ಭಗತ್ ಸಿಂಗ್ ಕಾಲೊನಿಯಲ್ಲಿ ನೀರಿನ ಟ್ಯಾಂಕ್ ಏರಿ ತಮಗೆ ತಾವೇ ಗುಂಡಿಕ್ಕಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೊಮ್ಮಗಳಿಗೆ ಕಿರುಕುಳ ನೀಡಿದ ಬಗ್ಗೆ ರಾಜೇಂದ್ರ ಬಹುಗುಣ ಅವರ ಸೊಸೆ ನೀಡಿದ್ದ ದೂರಿನ ಆಧಾರದಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು ಎಂದು ನೈನಿತಾಲ್ನ ಎಸ್ಎಸ್ಪಿ ಪಂಕಜ್ ಭಟ್ ತಿಳಿಸಿದ್ದಾರೆ.