<p><strong>ನವದೆಹಲಿ:</strong> ಕೋವಿಡ್ ಪ್ರಕರಣಗಳು ತೀವ್ರಗತಿ ಯಲ್ಲಿ ಏರುತ್ತಿರುವ ಕಾರಣ ವಿವಿಧ ರಾಜ್ಯಗಳಲ್ಲಿ ಆಮ್ಲಜನಕ ಸಿಲಿಂಡರ್ ಲಭ್ಯತೆ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ.</p>.<p>ಆಮ್ಲಜನಕ ಕೊರತೆ ಬಗ್ಗೆ ಆತಂಕ ವ್ಯಕ್ತವಾಗುತ್ತಿದ್ದು, ತುರ್ತಾಗಿ ಪೂರೈಸಲು ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ.ಕೋವಿಡ್ ಪ್ರಕರಣಗಳು ಹೆಚ್ಚಿರುವ ಕಡೆಗಳಿಗೆ ಆಮ್ಲಜನಕ ಪೂರೈಕೆಯನ್ನು ಆದ್ಯತೆಯ ಮೇರೆಗೆ ಪೂರೈಸಬೇಕು ಎಂದು ಸೂಚಿಸಿದೆ.</p>.<p>ದೆಹಲಿಯ ಪ್ರತಿ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಲಭ್ಯವಿರುವ ಹಾಸಿಗೆಗಳ ವಿವರ ನೀಡುವಂತೆ ನ್ಯಾಯಮೂರ್ತಿಗಳಾದ ವಿಪಿನ್ ಸಂಘಿ ಮತ್ತು ರೇಖಾ ಪಲ್ಲಿ ಅವರು ಸೂಚಿಸಿದರು. ಮಂಗಳವಾರ ಪ್ರಮಾಣಪತ್ರ ಸಲ್ಲಿಸಲು ತಿಳಿಸಲಾಗಿದೆ.</p>.<p>ದೆಹಲಿ ಆಸ್ಪತ್ರೆಗಳಿಗೆ ಆಮ್ಲಜನಕವನ್ನು ಪೂರೈಸುತ್ತಿದ್ದ ಐನಾಕ್ಸ್ ಸಂಸ್ಥೆಗೆ ನಿರ್ದೇಶನ ನೀಡಿರುವ ಕೋರ್ಟ್, ಸ್ಥಗಿತಗೊಂಡಿರುವ ಆಮ್ಲಜನಕ ಪೂರೈಕೆಯನ್ನು ತಕ್ಷಣವೇ ಆರಂಭಿಸಿ ಎಂದಿದೆ. ಶೀಘ್ರದಲ್ಲಿ ದೆಹಲಿಗೆ 140 ಟನ್ ಆಮ್ಲಜನಕ ಪೂರೈಸಲು ತಿಳಿಸಿದೆ.</p>.<p>ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ ಮತ್ತು ಹಾಸಿಗೆಗಳ ಲಭ್ಯತೆ ಕುರಿತು ಕೇಂದ್ರವು ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಸರ್ಕಾರದ ಪರ ವಕೀಲೆ ಮೋನಿಕಾ ಅರೋರಾ ತಿಳಿಸಿದರು. ಈ ಕುರಿತ ಮಾಹಿತಿಯನ್ನು ಪ್ರಮಾಣಪತ್ರದ ಮೂಲಕ ಸಲ್ಲಿಸಲಾಗುವುದು ಎಂದರು.</p>.<p class="Briefhead"><strong>ಆಮ್ಲಜನಕ ಸಂಗ್ರಹಕ್ಕೆ ಒತ್ತು</strong></p>.<p class="Subhead"><strong>ಮುಂಬೈ: </strong>ಕೋವಿಡ್ ರೋಗಿಗಳ ಚಿಕಿತ್ಸೆಗೆ ಬೇಕಾಗಿರುವ ಆಮ್ಲಜನಕ ಸಿಲಿಂಡರ್ ಸಂಗ್ರಹಿಸಲು ಮಹಾರಾಷ್ಟ್ರ ಸರ್ಕಾರ ಸಮರೋಪಾದಿಯಲ್ಲಿ ಕ್ರಮ ತೆಗೆದುಕೊಂಡಿದೆ.</p>.<p>ಮಹಾರಾಷ್ಟ್ರವು ದಿನಕ್ಕೆ 1,250 ಟನ್ ಆಮ್ಲಜನಕ ಉತ್ಪಾದನೆ ಸಾಮರ್ಥ್ಯ ಹೊಂದಿದೆ ಎಂದು ರಾಜ್ಯದ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ. ರಾಜ್ಯವು ಭಿಲಾಯಿ ಮತ್ತು ಬಳ್ಳಾರಿಯಿಂದ 300 ಟನ್ ತರಿಸಿಕೊಳ್ಳುತ್ತಿದೆ. ರೈಲ್ವೆ ಮೂಲಕ ಇನ್ನಷ್ಟು ಆಮ್ಲಜನಕ ದಾಸ್ತಾನು ತರಿಸಿಕೊಳ್ಳಲಾಗುವುದು ಎಂದಿದ್ದಾರೆ.</p>.<p>‘ನಾವು 1,800 ಟನ್ಗೆ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶ ವಿದೆ. ಹೆಚ್ಚಿನ ರೋಗಿಗಳು ಆಸ್ಪತ್ರೆ ಸೇರುತ್ತಿರುವುದರಿಂದ ಆಮ್ಲಜನಕದ ಸೌಲಭ್ಯಕ್ಕೆ ಬೇಡಿಕೆ ತೀವ್ರವಾಗಿ ಹೆಚ್ಚುತ್ತಿದೆ’ ಎಂದು ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಟೋಪೆ ಹೇಳಿದರು.</p>.<p><strong>ಪೂರೈಕೆಯಲ್ಲಿ ತಾರತಮ್ಯ ಆರೋಪ</strong></p>.<p>ಜೈಪುರ: ಗುಜರಾತ್ಗೆ 1,200 ಟನ್ ಆಮ್ಲಜನಕವನ್ನು ಪೂರೈಸಲಾಗುತ್ತಿದ್ದು, ರಾಜಸ್ಥಾನಕ್ಕೆ ಕೇವಲ 124 ಟನ್ ದೊರೆತಿದೆ ಎಂದು ರಾಜಸ್ಥಾನ ಆರೋಗ್ಯ ಸಚಿವ ರಘು ಶರ್ಮಾ ಸೋಮವಾರ ಆರೋಪಿಸಿದ್ದಾರೆ.</p>.<p>ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವ ಭಿವಾಡಿಯಲ್ಲಿರುವ ದ್ರವ ಆಮ್ಲಜನಕ ಘಟಕವನ್ನು ಉಲ್ಲೇಖಿಸಿ ಮಾತನಾಡಿದ ಸಚಿವರು, ‘ಕಳೆದ<br />ಬಾರಿ ಆಮ್ಲಜನಕದ ಕೊರತೆ ಇರಲಿಲ್ಲ. ಈ ಬಾರಿ ಹೆಚ್ಚಿನ ಆಮ್ಲಜನಕದ ಅಗತ್ಯವಿರುವಾಗ, ಕೇಂದ್ರವು ಎಲ್ಲಾ ವೈದ್ಯಕೀಯ ಆಮ್ಲಜನಕ ಘಟಕಗಳು ಹಾಗೂ ಪೂರೈಕೆ ಜಾಲವನ್ನು ಸ್ವಾಧೀನಪಡಿಸಿಕೊಂಡಿದೆ’ ಎಂದು ಆರೋಪಿಸಿದ್ದಾರೆ.</p>.<p><strong>***</strong></p>.<p>ವಿವಿಧ ರಾಜ್ಯಗಳಲ್ಲಿ ಲಸಿಕೆ ಮತ್ತು ಆಮ್ಲಜನಕದ ಕೊರತೆಯಿದ್ದು, ಅವುಗಳ ಪೂರೈಕೆಗೆ ಕೇಂದ್ರ ಆದ್ಯತೆ ನೀಡಬೇಕು. ಅಗತ್ಯವಿದ್ದರೆ ಆಮದು ಮಾಡಿಕೊಳ್ಳಬೇಕು<br /><strong>- ಮಾಯಾವತಿ, ಬಿಎಸ್ಪಿ ನಾಯಕಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್ ಪ್ರಕರಣಗಳು ತೀವ್ರಗತಿ ಯಲ್ಲಿ ಏರುತ್ತಿರುವ ಕಾರಣ ವಿವಿಧ ರಾಜ್ಯಗಳಲ್ಲಿ ಆಮ್ಲಜನಕ ಸಿಲಿಂಡರ್ ಲಭ್ಯತೆ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ.</p>.<p>ಆಮ್ಲಜನಕ ಕೊರತೆ ಬಗ್ಗೆ ಆತಂಕ ವ್ಯಕ್ತವಾಗುತ್ತಿದ್ದು, ತುರ್ತಾಗಿ ಪೂರೈಸಲು ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ.ಕೋವಿಡ್ ಪ್ರಕರಣಗಳು ಹೆಚ್ಚಿರುವ ಕಡೆಗಳಿಗೆ ಆಮ್ಲಜನಕ ಪೂರೈಕೆಯನ್ನು ಆದ್ಯತೆಯ ಮೇರೆಗೆ ಪೂರೈಸಬೇಕು ಎಂದು ಸೂಚಿಸಿದೆ.</p>.<p>ದೆಹಲಿಯ ಪ್ರತಿ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಲಭ್ಯವಿರುವ ಹಾಸಿಗೆಗಳ ವಿವರ ನೀಡುವಂತೆ ನ್ಯಾಯಮೂರ್ತಿಗಳಾದ ವಿಪಿನ್ ಸಂಘಿ ಮತ್ತು ರೇಖಾ ಪಲ್ಲಿ ಅವರು ಸೂಚಿಸಿದರು. ಮಂಗಳವಾರ ಪ್ರಮಾಣಪತ್ರ ಸಲ್ಲಿಸಲು ತಿಳಿಸಲಾಗಿದೆ.</p>.<p>ದೆಹಲಿ ಆಸ್ಪತ್ರೆಗಳಿಗೆ ಆಮ್ಲಜನಕವನ್ನು ಪೂರೈಸುತ್ತಿದ್ದ ಐನಾಕ್ಸ್ ಸಂಸ್ಥೆಗೆ ನಿರ್ದೇಶನ ನೀಡಿರುವ ಕೋರ್ಟ್, ಸ್ಥಗಿತಗೊಂಡಿರುವ ಆಮ್ಲಜನಕ ಪೂರೈಕೆಯನ್ನು ತಕ್ಷಣವೇ ಆರಂಭಿಸಿ ಎಂದಿದೆ. ಶೀಘ್ರದಲ್ಲಿ ದೆಹಲಿಗೆ 140 ಟನ್ ಆಮ್ಲಜನಕ ಪೂರೈಸಲು ತಿಳಿಸಿದೆ.</p>.<p>ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ ಮತ್ತು ಹಾಸಿಗೆಗಳ ಲಭ್ಯತೆ ಕುರಿತು ಕೇಂದ್ರವು ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಸರ್ಕಾರದ ಪರ ವಕೀಲೆ ಮೋನಿಕಾ ಅರೋರಾ ತಿಳಿಸಿದರು. ಈ ಕುರಿತ ಮಾಹಿತಿಯನ್ನು ಪ್ರಮಾಣಪತ್ರದ ಮೂಲಕ ಸಲ್ಲಿಸಲಾಗುವುದು ಎಂದರು.</p>.<p class="Briefhead"><strong>ಆಮ್ಲಜನಕ ಸಂಗ್ರಹಕ್ಕೆ ಒತ್ತು</strong></p>.<p class="Subhead"><strong>ಮುಂಬೈ: </strong>ಕೋವಿಡ್ ರೋಗಿಗಳ ಚಿಕಿತ್ಸೆಗೆ ಬೇಕಾಗಿರುವ ಆಮ್ಲಜನಕ ಸಿಲಿಂಡರ್ ಸಂಗ್ರಹಿಸಲು ಮಹಾರಾಷ್ಟ್ರ ಸರ್ಕಾರ ಸಮರೋಪಾದಿಯಲ್ಲಿ ಕ್ರಮ ತೆಗೆದುಕೊಂಡಿದೆ.</p>.<p>ಮಹಾರಾಷ್ಟ್ರವು ದಿನಕ್ಕೆ 1,250 ಟನ್ ಆಮ್ಲಜನಕ ಉತ್ಪಾದನೆ ಸಾಮರ್ಥ್ಯ ಹೊಂದಿದೆ ಎಂದು ರಾಜ್ಯದ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ. ರಾಜ್ಯವು ಭಿಲಾಯಿ ಮತ್ತು ಬಳ್ಳಾರಿಯಿಂದ 300 ಟನ್ ತರಿಸಿಕೊಳ್ಳುತ್ತಿದೆ. ರೈಲ್ವೆ ಮೂಲಕ ಇನ್ನಷ್ಟು ಆಮ್ಲಜನಕ ದಾಸ್ತಾನು ತರಿಸಿಕೊಳ್ಳಲಾಗುವುದು ಎಂದಿದ್ದಾರೆ.</p>.<p>‘ನಾವು 1,800 ಟನ್ಗೆ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶ ವಿದೆ. ಹೆಚ್ಚಿನ ರೋಗಿಗಳು ಆಸ್ಪತ್ರೆ ಸೇರುತ್ತಿರುವುದರಿಂದ ಆಮ್ಲಜನಕದ ಸೌಲಭ್ಯಕ್ಕೆ ಬೇಡಿಕೆ ತೀವ್ರವಾಗಿ ಹೆಚ್ಚುತ್ತಿದೆ’ ಎಂದು ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಟೋಪೆ ಹೇಳಿದರು.</p>.<p><strong>ಪೂರೈಕೆಯಲ್ಲಿ ತಾರತಮ್ಯ ಆರೋಪ</strong></p>.<p>ಜೈಪುರ: ಗುಜರಾತ್ಗೆ 1,200 ಟನ್ ಆಮ್ಲಜನಕವನ್ನು ಪೂರೈಸಲಾಗುತ್ತಿದ್ದು, ರಾಜಸ್ಥಾನಕ್ಕೆ ಕೇವಲ 124 ಟನ್ ದೊರೆತಿದೆ ಎಂದು ರಾಜಸ್ಥಾನ ಆರೋಗ್ಯ ಸಚಿವ ರಘು ಶರ್ಮಾ ಸೋಮವಾರ ಆರೋಪಿಸಿದ್ದಾರೆ.</p>.<p>ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವ ಭಿವಾಡಿಯಲ್ಲಿರುವ ದ್ರವ ಆಮ್ಲಜನಕ ಘಟಕವನ್ನು ಉಲ್ಲೇಖಿಸಿ ಮಾತನಾಡಿದ ಸಚಿವರು, ‘ಕಳೆದ<br />ಬಾರಿ ಆಮ್ಲಜನಕದ ಕೊರತೆ ಇರಲಿಲ್ಲ. ಈ ಬಾರಿ ಹೆಚ್ಚಿನ ಆಮ್ಲಜನಕದ ಅಗತ್ಯವಿರುವಾಗ, ಕೇಂದ್ರವು ಎಲ್ಲಾ ವೈದ್ಯಕೀಯ ಆಮ್ಲಜನಕ ಘಟಕಗಳು ಹಾಗೂ ಪೂರೈಕೆ ಜಾಲವನ್ನು ಸ್ವಾಧೀನಪಡಿಸಿಕೊಂಡಿದೆ’ ಎಂದು ಆರೋಪಿಸಿದ್ದಾರೆ.</p>.<p><strong>***</strong></p>.<p>ವಿವಿಧ ರಾಜ್ಯಗಳಲ್ಲಿ ಲಸಿಕೆ ಮತ್ತು ಆಮ್ಲಜನಕದ ಕೊರತೆಯಿದ್ದು, ಅವುಗಳ ಪೂರೈಕೆಗೆ ಕೇಂದ್ರ ಆದ್ಯತೆ ನೀಡಬೇಕು. ಅಗತ್ಯವಿದ್ದರೆ ಆಮದು ಮಾಡಿಕೊಳ್ಳಬೇಕು<br /><strong>- ಮಾಯಾವತಿ, ಬಿಎಸ್ಪಿ ನಾಯಕಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>