ವಿದ್ಯಾರ್ಥಿಗಳ ಹಿತದೃಷ್ಟಿ ಹಾಗೂ ಉನ್ನತ ಮಟ್ಟದ ಸಮಿತಿಯ ಶಿಫಾರಸು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಂತಿಮ ಸೆಮಿಸ್ಟರ್ ಹೊರತುಪಡಿಸಿ, ಇತರೆ ಸೆಮಿಸ್ಟರ್ಗಳ ಪರೀಕ್ಷೆಗೆ ಶುಲ್ಕ ಕಟ್ಟಿದ ವಿದ್ಯಾರ್ಥಿಗಳಿಗೆ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ. ಈ ಹಿಂದಿನ ಶೈಕ್ಷಣಿಕ ಪ್ರಗತಿ ಪರಿಗಣಿಸಿ ಅವರಿಗೆ ಅಂಕಗಳನ್ನು ನೀಡಲಾಗುವುದು’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.