<p class="title">ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪಿಯಾಗಿರುವ ಉದ್ಯಮಿ ದಿನೇಶ್ ಅರೋರಾ ಅವರನ್ನು ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ಅಂಗೀಕರಿಸಿದೆ ಎಂದು ಕೋರ್ಟಿನ ಮೂಲಗಳು ತಿಳಿಸಿವೆ.</p>.<p class="title">ವಿಶೇಷ ನ್ಯಾಯಮೂರ್ತಿ ಎಂ.ಕೆ. ನಾಗಪಾಲ್ ಅವರು ಅರೋರಾ ಅವರಿಗೆ ಕ್ಷಮಾದಾನದ ಆದೇಶವನ್ನೂ ನೀಡಿದ್ದಾರೆ.</p>.<p class="title">ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಅರೋರಾ ಅವರು, ತಾವು ಸ್ವಯಂಪ್ರೇರಣೆಯಿಂದ ನಿಜ ಹೇಳಲು ಸಿದ್ಧವಿರುವುದಾಗಿ ಹಾಗೂ ಪ್ರಕರಣದಲ್ಲಿ ಸಾಕ್ಷಿಯಾಗಲು ಸಿದ್ಧವಿರುವುದಾಗಿ ನ್ಯಾಯಾಲಯದ ಮುಂದೆ ಹೇಳಿದ್ದಾರೆ.</p>.<p class="title">ಈಹಿಂದೆ ನ್ಯಾಯಾಲಯವು ಅರೋರಾ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.ಇದಕ್ಕೆ ಸಂಬಂಧಿಸಿದಂತೆ ಸಿಬಿಐ, ‘ಅರೋರಾ ಅವರು ತನಿಖೆಯಲ್ಲಿ ಪ್ರಮುಖ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. ಹಾಗಾಗಿ, ಅವರಿಗೆ ನಿರೀಕ್ಷಣಾ ಜಾಮೀನು ನೀಡಿದರೆ ತಮಗೆ ಯಾವುದೇ ಅಭ್ಯಂತರವಿಲ್ಲ’ ಎಂದು ನ್ಯಾಯಾಲಯದ ಮುಂದೆ ಹೇಳಿತ್ತು.</p>.<p class="title">ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಅರೋರಾ ಆಪ್ತರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title">ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪಿಯಾಗಿರುವ ಉದ್ಯಮಿ ದಿನೇಶ್ ಅರೋರಾ ಅವರನ್ನು ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ಅಂಗೀಕರಿಸಿದೆ ಎಂದು ಕೋರ್ಟಿನ ಮೂಲಗಳು ತಿಳಿಸಿವೆ.</p>.<p class="title">ವಿಶೇಷ ನ್ಯಾಯಮೂರ್ತಿ ಎಂ.ಕೆ. ನಾಗಪಾಲ್ ಅವರು ಅರೋರಾ ಅವರಿಗೆ ಕ್ಷಮಾದಾನದ ಆದೇಶವನ್ನೂ ನೀಡಿದ್ದಾರೆ.</p>.<p class="title">ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಅರೋರಾ ಅವರು, ತಾವು ಸ್ವಯಂಪ್ರೇರಣೆಯಿಂದ ನಿಜ ಹೇಳಲು ಸಿದ್ಧವಿರುವುದಾಗಿ ಹಾಗೂ ಪ್ರಕರಣದಲ್ಲಿ ಸಾಕ್ಷಿಯಾಗಲು ಸಿದ್ಧವಿರುವುದಾಗಿ ನ್ಯಾಯಾಲಯದ ಮುಂದೆ ಹೇಳಿದ್ದಾರೆ.</p>.<p class="title">ಈಹಿಂದೆ ನ್ಯಾಯಾಲಯವು ಅರೋರಾ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.ಇದಕ್ಕೆ ಸಂಬಂಧಿಸಿದಂತೆ ಸಿಬಿಐ, ‘ಅರೋರಾ ಅವರು ತನಿಖೆಯಲ್ಲಿ ಪ್ರಮುಖ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. ಹಾಗಾಗಿ, ಅವರಿಗೆ ನಿರೀಕ್ಷಣಾ ಜಾಮೀನು ನೀಡಿದರೆ ತಮಗೆ ಯಾವುದೇ ಅಭ್ಯಂತರವಿಲ್ಲ’ ಎಂದು ನ್ಯಾಯಾಲಯದ ಮುಂದೆ ಹೇಳಿತ್ತು.</p>.<p class="title">ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಅರೋರಾ ಆಪ್ತರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>