ಕಳೆದ ಫೆಬ್ರುವರಿಯಲ್ಲಿ ಸಂಭವಿಸಿದ್ದ ಭಾರಿ ಮಳೆ, ಭೂಕುಸಿತದ ಪರಿಣಾಮ ಗ್ರಾಮಸ್ಥರು ಭಾರಿ ಸಂಕಷ್ಟ ಎದುರಿಸಿದ್ದರು. ಗ್ರಾಮದ ಬಳಿಯ ರಿಷಿ ಗಂಗಾ ನದಿಯಲ್ಲಿ ನಿರ್ಮಿಸಲಾಗಿದ್ದ ಜಲವಿದ್ಯುತ್ ಉತ್ಪಾದನೆ ಸ್ಥಾವರ ಸಂಪೂರ್ಣ ಕೊಚ್ಚಿಕೊಂಡು ಹೋಗಿತ್ತು. ಇದು ಸೇರಿದಂತೆ ಆಗಾಗ ಸಂಭವಿಸಿದ ನೈಸರ್ಗಿಕ ವಿಕೋಪಗಳು ಗ್ರಾಮಸ್ಥರ ನೆಮ್ಮದಿಯನ್ನೇ ಕಸಿದಿವೆ.