ಬೆಂಗಳೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸೈನ್ಸನ್ನಲ್ಲಿ ವಿದ್ಯಾರ್ಥಿಗಳು ಮತ್ತು ಸಂಶೋಧಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಯುದ್ಧದ ಪರಿಣಾಮ ಉಂಟಾಗಿರುವ ರಸಗೊಬ್ಬರದ ಕೊರತೆಯು ಪರೋಕ್ಷವಾಗಿ ಸಮಸ್ಯೆ ಸೃಷ್ಟಿಸಬಹುದು. ಅದರಿಂದ ಮುಂದೆ, ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಬಹುದು. ಇದು ಆಹಾರದ ಕೊರತೆಗೆ ದಾರಿ ಮಾಡಿಕೊಡಬಹುದು ಎಂದು ಹೇಳಿದ್ದಾರೆ.