ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂರ್ವ ಲಡಾಖ್‌ನಲ್ಲಿ ಪರಿಸ್ಥಿತಿ ಗಂಭೀರವಾಗಿದೆ: ವಿದೇಶಾಂಗ ಸಚಿವ ಜೈಶಂಕರ್

Last Updated 8 ಸೆಪ್ಟೆಂಬರ್ 2020, 5:39 IST
ಅಕ್ಷರ ಗಾತ್ರ

ನವದೆಹಲಿ: ಪೂರ್ವ ಲಡಾಖ್‌ನ ಗಡಿಪ್ರದೇಶದಲ್ಲಿ ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ರಾಜತಾಂತ್ರಿಕ ಮಟ್ಟದಲ್ಲಿ ಎರಡೂ ಕಡೆಯಿಂದ ಹೆಚ್ಚಿನ ಮಾತುಕತೆ ಅಗತ್ಯ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.

ಸಂವಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಚೀನಾದೊಂದಿಗಿನ ಗಡಿಯ ಪರಿಸ್ಥಿತಿಯನ್ನು ಆ ದೇಶದ ಜೊತೆಗಿನ ಒಟ್ಟಾರೆ ಸಂಬಂಧದಿಂದ ಬೇರ್ಪಡಿಸಲಾಗದು. ಗಾಲ್ವನ್ ಕಣಿವೆಯ ದುರದೃಷ್ಟಕರ ಘಟನೆ ಸಂಭವಿಸುವ ಮೊದಲೇ ಅದನ್ನು ನಾನು ಬರೆದಿದ್ದೇನೆ ಎಂದು ತಮ್ಮ ಹೊಸ ಪುಸ್ತಕ ‘ದಿ ಇಂಡಿಯಾ ವೇ’ ಉಲ್ಲೇಖಿಸಿ ಹೇಳಿದ್ದಾರೆ.

ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಜೊತೆ ರಷ್ಯಾದ ಮಾಸ್ಕೊದಲ್ಲಿ ಈ ವಾರಾಂತ್ಯ ಜೈಶಂಕರ್ ಮಾತುಕತೆ ನಡೆಸುವ ನಿರೀಕ್ಷೆ ಇದೆ. ಶಾಂಘೈ ಸಹಕಾರ ಸಂಸ್ಥೆಯ (ಎಸ್‌ಸಿಒ) ಸಭೆಯ ಸಂದರ್ಭ ಮಾತುಕತೆ ನಡೆಯುವ ಸಾಧ್ಯತೆ ಇದೆ.

ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿ ಇಲ್ಲದಿದ್ದರೆ ಉಳಿದ ಬಾಂಧವ್ಯ ಚೆನ್ನಾಗಿ ಸಾಗುವುದು ಸಾಧ್ಯವಿಲ್ಲ. ಯಾಕೆಂದರೆ ಶಾಂತಿ ಮತ್ತು ನೆಮ್ಮದಿಯು ಉಭಯ ರಾಷ್ಟ್ರಗಳ ನಡುವಣ ಒಟ್ಟು ಬಾಂಧವ್ಯದ ತಳಹದಿಯಾಗಿದೆ ಎಂದು ಜೈಶಂಕರ್ ಹೇಳಿದ್ದಾರೆ.

ಚೀನಾ ವಿದೇಶಾಂಗ ಸಚಿವರ ಜೊತೆಗಿನ ಮಾತುಕತೆ ವೇಳೆ ಅವರ ಬಳಿ ಏನು ಹೇಳಲಿದ್ದೇನೆ ಎಂಬುದನ್ನು ಈಗಲೇ ಹೇಳಲಾಗದು ಎಂದೂ ಅವರು ಹೇಳಿದ್ದಾರೆ.

ಜೂನ್ 15ರಂದುಗಾಲ್ವನ್ ಕಣಿವೆಪ್ರದೇಶದಲ್ಲಿ ನಡೆದಿದ್ದ ಸಂಘರ್ಷದಲ್ಲಿ ಭಾರತೀಯ ಸೇನೆಯ ಕರ್ನಲ್ ಶ್ರೇಣಿಯ ಅಧಿಕಾರಿ ಸೇರಿದಂತೆ 21 ಯೋಧರು ಹುತಾತ್ಮರಾಗಿದ್ದರು. ಆ ಬಳಿಕ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಾಗೆಯೇ ಮುಂದುವರಿದಿದೆ.

ಪೂರ್ವ ಲಡಾಖ್‌ನ ಪಾಂಗಾಂಗ್ ಸರೋವರದ ದಕ್ಷಿಣ ದಂಡೆ ಬಳಿ ಭಾರತ–ಚೀನಾ ಸೇನಾ ಪಡೆಗಳ ಮಧ್ಯೆ ಸೋಮವಾರ ರಾತ್ರಿ ಗುಂಡಿನ ಚಕಮಕಿಯೂ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT