‘ನಾವು ಉತ್ತಮವಾಗಿಯೇ ಪ್ರಯತ್ನ ಮಾಡುತ್ತಿದ್ದೇವೆ. ಆದಾಗ್ಯೂ, ಪ್ರಕ್ರಿಯೆ ಸ್ಥಗಿತಗೊಂಡಿದೆ. ರಾಜಕೀಯದಿಂದ ಆಡಳಿತಾತ್ಮಕ ಹಂತದ ವರೆಗೆ ಮಲ್ಯ ಗಡಿಪಾರಿಗೆ ಸಂಬಂಧಿಸಿದ ವಿಷಯವನ್ನು ಉನ್ನತ ಮಟ್ಟದಲ್ಲಿ ಪದೇಪದೇ ಪ್ರಸ್ತಾಪಿಸಲಾಗುತ್ತಿದೆ’ ಎಂದು ನ್ಯಾಯಮೂರ್ತಿ ಯು.ಯು. ಲಲಿತ್ ಮತ್ತು ಅಶೋಕ್ ಭೂಷಣ್ ಅವರಿದ್ದ ಪೀಠಕ್ಕೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದ್ದಾರೆ.