ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್‌ಕೋಟ್‌ ಬೆಂಕಿ ಅವಘಡ ತೀವ್ರ ನೋವು ತರಿಸಿದೆ: ಪ್ರಧಾನಿ ಮೋದಿ

Last Updated 27 ನವೆಂಬರ್ 2020, 7:18 IST
ಅಕ್ಷರ ಗಾತ್ರ

ನವದೆಹಲಿ: ರಾಜ್‌ಕೋಟ್‌ ಆಸ್ಪತ್ರೆ ಬೆಂಕಿ ಅವಘಡದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಈ ಘಟನೆಯು ತೀವ್ರ ನೋವು ತರಿಸಿದೆ ಎಂದಿರುವ ಪ್ರಧಾನಿ ಅವರು, ಸರ್ಕಾರ ಸಂತ್ರಸ್ಥರಿಗೆ ಎಲ್ಲಾ ರೀತಿಯ ನೆರವು ನೀಡುತ್ತದೆ ಎಂದು ಭರವಸೆ ನೀಡಿದ್ದಾರೆ.

ರಾಜ್‌ಕೋಟ್‌ನ ಕೋವಿಡ್‌ ಆಸ್ಪತ್ರೆಯ ಐಸಿಯುನಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಐದು ಮಂದಿ ಕೋವಿಡ್‌ ರೋಗಿಗಳು ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದರು.

‘ರಾಜ್‌ಕೋಟ್‌ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಪ್ರಾಣಹಾನಿಯಾಗಿದೆ. ಈ ಬಗ್ಗೆ ನನಗೆ ಬಹಳ ಬೇಸರವಿದೆ. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸರ್ಕಾರವು ಪೀಡಿತರಿಗೆ ಎಲ್ಲಾ ರೀತಿಯ ನೆರವು ನೀಡಲಿದೆ’ ಎಂದು ಪ್ರಧಾನಿ ಸಚಿವಾಲಯ ಟ್ವೀಟ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT